LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ವಿಧಿವಶ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಇಂದು ಬೆಳಗಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರು ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್‌ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು. ಇಂದು ಬೆಳಗ್ಗೆ ಮನೆಯಿಂದ ಚೆಕಪ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು ಎನ್ನಲಾಗಿದೆ.

ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್‌ ಮಾಡಲಾಗುತ್ತದೆ.

ಸದಾಶಿವನಗರ ಎಸ್ ಎಂ ಕೃಷ್ಣ ಮನೆ ಬಳಿ ಪೊಲೀಸರ ಅಲರ್ಟ್‌ ಆಗಿದ್ದು, ನಿವಾಸದ ಅಕ್ಕಪಕ್ಕ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ.

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್​ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್​ನಿಂದಲೂ ಪದವಿ ಪಡೆದಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್