LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪುರಿ ಜಗನ್ನಾಥ ದೇಗುಲದ ನಾಲ್ಕು ಪ್ರವೇಶದ್ವಾರಗಳು ಪ್ರವೇಶಕ್ಕೆ ಮುಕ್ತ

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಅವರ ಸಚಿವ ಸಂಪುಟದ ಸಮ್ಮುಖದಲ್ಲಿ ಪುರಿಯ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ಗುರುವಾರ ಬೆಳಗ್ಗೆ ತೆರೆಯಲಾಯಿತು.

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಸಮಯದಲ್ಲಿ ಮುಚ್ಚಲಾಗಿದ್ದ 12 ನೇ ಶತಮಾನದ ದೇಗುಲದ ಮೂರು ದ್ವಾರಗಳನ್ನು ಭಗವಾನ್ ಜಗನ್ನಾಥನ 'ಮಂಗಲ ಆರತಿ' ಆಚರಣೆಯ ನಂತರ ಮತ್ತೆ ತೆರೆಯಲಾಯಿತು.

ಮುಖ್ಯಮಂತ್ರಿ, ಇಬ್ಬರು ಉಪ ಮುಖ್ಯಮಂತ್ರಿಗಳು, ಸಚಿವರು, ಹಲವು ಬಿಜೆಪಿ ಸಂಸದರು ಮತ್ತು ಪಕ್ಷದ ಮುಖಂಡರು ದೇವಾಲಯಕ್ಕೆ ಭೇಟಿ ನೀಡಿ ಜಗನ್ನಾಥ ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದರು. ಅವರು ದೇವಾಲಯದ ಸಂಕೀರ್ಣದ ಸುತ್ತಲೂ 'ಪರಿಕ್ರಮ'ವನ್ನೂ ನಡೆಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ, ಬಿಜೆಪಿ ಸರ್ಕಾರವು ನಿನ್ನೆ ಬುಧವಾರ ಸಂಜೆ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲು ತನ್ನ ಮೊದಲ ನಿರ್ಧಾರವನ್ನು ತೆಗೆದುಕೊಂಡಿದೆ. ಇಂದು, 'ಮಂಗಳ ಆರತಿ' ಆಚರಣೆಯ ನಂತರ ಬೆಳಗ್ಗೆ 6.30 ಕ್ಕೆ ಗೇಟ್‌ಗಳನ್ನು ಮತ್ತೆ ತೆರೆಯಲಾಯಿತು ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪುರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್