Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಸಿಂಗ್‌ಭೂಮ್ ಅರಣ್ಯದಲ್ಲಿ ನಾಲ್ವರು ನಕ್ಸಲರ ಹತ್ಯೆ

ಚೈಬಾಸಾ : ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗುವಾ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಸೋಮವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರಿಗೆ ಭಾರೀ ಆಘಾತ ಉಂಟಾಗಿದೆ. ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹತ್ಯೆ ಮಾಡಿವೆ. ಘಟನಾ ಸ್ಥಳದಿಂದ ನಕ್ಸಲರ ಶವಗಳ ಜೊತೆಗೆ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಮಾಹಿತಿ ಪ್ರಕಾರ, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಅಷ್ಟರಲ್ಲಿ ಹೊಂಚು ಹಾಕಿ ಕುಳಿತಿದ್ದ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾರೆ. ಪ್ರತಿದಾಳಿ ನಡೆಸಿದ ಸೈನಿಕರು ನಾಲ್ವರು ನಕ್ಸಲರನ್ನು ಕೊಂದು ಹಾಕಿದ್ದಾರೆ. ಸದ್ಯ ಈ ಘಟನಾ ಸ್ಥಳದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೆಲವು ನಕ್ಸಲರು ಗುಂಡು ಹಾರಿಸಿದ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.


ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?: ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಈ ಎನ್‌ಕೌಂಟರ್ ಅನ್ನು ಖಚಿತಪಡಿಸಿದ್ದಾರೆ. ಸೋಮವಾರ ಬೆಳಗ್ಗೆ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ.

Advertisement

ನಾಲ್ವರು ನಕ್ಸಲರ ಹತ್ಯೆ, ಇಬ್ಬರಿಗೆ ಗಾಯ: ಹತರಾದ ನಕ್ಸಲರಲ್ಲಿ ಝೋನಲ್ ಕಮಾಂಡರ್, ಸಬ್ ಝೋನಲ್ ಕಮಾಂಡರ್, ಏರಿಯಾ ಕಮಾಂಡರ್, ಓರ್ವ ಮಹಿಳೆ ನಕ್ಸಲೈಟ್ ಸೇರಿದ್ದಾರೆ. ಪ್ರದೇಶದ ಕಮಾಂಡರ್ ಮತ್ತು ಹಾರ್ಡ್‌ಕೋರ್ ಮಹಿಳಾ ನಕ್ಸಲೈಟ್ ಸೇರಿದಂತೆ ಇಬ್ಬರು ನಕ್ಸಲರು ಗಾಯಗೊಂಡಿದ್ದಾರೆ ಎಂಬುದು ತಿಳಿದಿದೆ. ಜೊತೆಗೆ ಓರ್ವ ಮಹಿಳಾ ನಕ್ಸಲೈಟ್ ಅನ್ನು ಬಂಧಿಸಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*