LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ

ನವದೆಹಲಿ,13: ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಸೋಮವಾರ (ಮೇ 13) ಆರಂಭಗೊಂಡಿದೆ. ಆಂಧ್ರಪ್ರದೇಶದಲ್ಲಿ ತನ್ನ ಎಲ್ಲ 25 ಲೋಕಸಭಾ ಸ್ಥಾನಗಳು ಮತ್ತು 175 ವಿಧಾನಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಡಿಶಾ ವಿಧಾನಸಭೆ ಚುನಾವಣೆಗೆ ಸಹ ಮತದಾನ ಆರಂಭವಾಗಿದೆ.




82 ದಿನಗಳ ಸುದೀರ್ಘ, ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 96 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.

ಏಪ್ರಿಲ್ 19, ಏಪ್ರಿಲ್ 26 ಮತ್ತು ಮೇ 7 ರಂದು ನಡೆದ ಮೊದಲ ಮೂರು ಹಂತಗಳಲ್ಲಿ 283 ಲೋಕಸಭಾ ಕ್ಷೇತ್ರಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಮೊದಲ ಮೂರು ಹಂತಗಳಲ್ಲಿ ಕ್ರಮವಾಗಿ ಶೇ 66.1, ಶೇ 66.7 ಮತ್ತು ಶೇ 61 ರಷ್ಟು ಮತದಾನ ದಾಖಲಾಗಿದೆ.








ನಾಲ್ಕನೇ ಹಂತದ ಮತದಾನದಲ್ಲಿ ಆಂಧ್ರ ಪ್ರದೇಶ ವಿಧಾನಸಭೆಗೆ (175 ಸ್ಥಾನಗಳು) ಮತ್ತು ಲೋಕಸಭೆಗೆ (25 ಸ್ಥಾನಗಳು) ಏಕಕಾಲದಲ್ಲಿ ಚುನಾವಣೆಗೆ ಸಾಕ್ಷಿಯಾಗಲಿದೆ. ತೆಲಂಗಾಣದಲ್ಲಿ 17 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ನಾಲ್ಕನೇ ಹಂತದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಟಿಎಂಸಿಯ ಮಹುವಾ ಮೊಯಿತ್ರಾ, ಶತ್ರುಘ್ನ ಸಿನ್ಹಾ ಮತ್ತು ಯೂಸುಫ್ ಪಠಾಣ್ ಮತ್ತು ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಮತ್ತು ವೈಎಸ್ ಶರ್ಮಿಳಾ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಬಿಜೆಪಿಯ ಕೇಂದ್ರ ಸಚಿವರಾದ ಜಿ ಕಿಶನ್ ರೆಡ್ಡಿ, ಅರ್ಜುನ್ ಮುಂಡಾ, ಅಜಯ್ ಮಿಶ್ರಾ ತೇನಿ, ಗಿರಿರಾಜ್ ಸಿಂಗ್ ಮತ್ತು ನಿತ್ಯಾನಂದ್ ರೈ ಸೇರಿದಂತೆ ಪಕ್ಷದ ನಾಯಕರಾದ ಸಾಕ್ಷಿ ಮಹಾರಾಜ್, ದಿಲೀಪ್ ಘೋಷ್, ಪಂಕಜಾ ಮುಂಡೆ, ಬಂಡಿ ಸಂಜಯ್, ಮಾಧವಿ ಲತಾ ಮತ್ತು ದಗ್ಗುಬಾಟಿ ಪುರಂದೇಶ್ವರಿ ಸೇರಿದಂತೆ ದೊಡ್ಡ ಹೆಸರುಗಳಿವೆ.

ನಾಲ್ಕನೇ ಹಂತದ ಮತದಾನ

ಆಂಧ್ರ ಪ್ರದೇಶ: ಎಲ್ಲ 25 ಸ್ಥಾನಗಳು

ತೆಲಂಗಾಣ: ಎಲ್ಲ 17 ಸ್ಥಾನಗಳು

ಜಾರ್ಖಂಡ್: 14 ಕ್ಷೇತ್ರಗಳ ಪೈಕಿ 4 ಸ್ಥಾನಗಳು

ಒಡಿಶಾ: 21 ಕ್ಷೇತ್ರಗಳಳ್ಲಿ 4 ಸ್ಥಾನಗಳು

ಉತ್ತರ ಪ್ರದೇಶ: 80 ರಲ್ಲಿ 13 ಸ್ಥಾನಗಳು

ಮಧ್ಯಪ್ರದೇಶ: 29 ರಲ್ಲಿ 8 ಸ್ಥಾನಗಳು

ಬಿಹಾರ: 40 ರಲ್ಲಿ 5 ಸ್ಥಾನಗಳು

ಮಹಾರಾಷ್ಟ್ರ: 48 ರಲ್ಲಿ 11 ಸ್ಥಾನಗಳು

ಪಶ್ಚಿಮ ಬಂಗಾಳ: 42 ಸ್ಥಾನಗಳಲ್ಲಿ 8 ಕ್ಷೇತ್ರಗಳು

ಜಮ್ಮು ಮತ್ತು ಕಾಶ್ಮೀರ: 5 ರಲ್ಲಿ 1 ಸ್ಥಾನ

ಆಂಧ್ರ ಪ್ರದೇಶ: ಎಲ್ಲ 175 ವಿಧಾನಸಭಾ ಸ್ಥಾನಗಳು



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ