LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿವಗಿರಿ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ



ಬೆಳಗಾವಿ:   ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಶಿವಗಿರಿ ಕೋ ಆಪ್ ಕ್ರೆಡಿಟ್ ಸೊಸೈಟಿ  ವತಿಯಿಂದ ಬಿಲ್ಲವರ ಅಸೋಸಿಯೇಶನ್ ಸಹಯೋಗದೊಂದಿಗೆ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿ ವಿತರಿಸಲಾಯಿತು.

ಈ ವೇಳೆ  ದಂತ ವೈದ್ಯರಾದ ಡಾ. ತೇಜಸ್ವಿನಿ ಹೊಂಗಲ್  ಅವರು ಮಾತನಾಡಿ,  ಸಾಮಾಜಿಕ ಜವಾಬ್ದಾರಿ ನಿಧಿಯ ಅಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂಘವು ಈ ಜನಪರ ಕಾರ್ಯಕ್ರಮವನ್ನು ಆಯೋಜಿಸಿದೆ ಸಂತೋಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದ ಹಾದಿ ಸುಲಭವಾಗಲಿ ಎಂಬ ಉದ್ದೇಶದಿಂದ ಶಿವಗಿರಿ ಕ್ರೆಡಿಟ್ ಸೊಸೈಟಿಯು ನಿರಂತರ ಸೇವೆಯನ್ನು ಒದಗಿಸುತ್ತಾ ಬಂದಿದೆ.  ಸಂಘದ ಸದಸ್ಯರ ಮಕ್ಕಳು ಹಾಗೂ ಸ್ಥಳೀಯ ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಆಗಮಿಸಿದಕ್ಕೆ ದನ್ಯವಾದ, ನಿಮ್ಮ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು.

ಸೊಸೈಟಿಯ ಈ ಶ್ಲಾಘನೀಯ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಶಿವಗಿರಿ ಸೊಸೈಟಿಯ ಅಧ್ಯಕ್ಷರಾದ ಸುಜನ್ ಕುಮಾರ್ , ಬಿಲ್ಲವ ಸಂಘದ ಅಧ್ಯಕ್ಷರಾದ ಸುನಿಲ್  ಆರ್ ಪೂಜಾರಿ ಹಾಗು ಸೊಸೈಟಿಯ ಕಟ್ಟಡ ಮಾಲಿಕರು ಹಾಗು ಉದ್ಯಮಿಗಳಾದ ಸುನಿಲ್ ನಾಯ್ಕ ರವರು  ವಿದ್ಯಾರ್ಥಿಗಳು  ಹಾಗು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ ಸಂಘದ  ಹಿತೈಷಿಗಳಾದ ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ  ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಡಾ.  ಸುನೀತಾ ಬಂಗೇರರವರು 11000   ರೂ.  ದೇಣಿಗೆ ನೀಡಿದರು.

ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಸ್ತಕಗಳನ್ನು ಪಡೆದುಕೊಂಡರು . ಸೊಸೈಟಿಯ ನಿರ್ದೇಶಕರುಗಳು ಹಾಗು ಸಿಬ್ಬಂದಿವರ್ಗ , ಬಿಲ್ಲವ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಗು ಮಹಿಳಾ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವ್ಯವಸ್ಥಾಪಕರಾದ ಚಂದ್ರ ಎಚ್ .ಪೂಜಾರಿ ನಿರೂಪಿಸಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್