LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀಮತಿ ಹೇಮಾವತಿ ಹೆಗ್ಗೆಡೆಯವರ  ಹುಟ್ಟು ಹಬ್ಬದ ಪ್ರಯುಕ್ತ  ಹಣ್ಣು ಹಂಪಲು  ವಿತರಣೆ.






 ಪಾಶ್ಚಾಪೂರ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹಾಗೂ ಧರ್ಮಸ್ಥಳದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ  ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಪಾಶ್ಚಾಪೂರ ಗ್ರಾಮದಲ್ಲಿ ಧರ್ಮಸ್ಥಳದಿಂದ ಪ್ರತಿ  ತಿಂಗಳು ಮಾಸಾಶನ ಪಡೆಯುತ್ತಿರುವ ನಿರ್ಗತಿಕ ವಾತ್ಸಲ್ಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಹಣ್ಣು ಹಂಪಲು ವಿತರಣೆ ಮಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶ್ರೀಕಾಂತ ನಾಯ್ಕ್ ಮಾತನಾಡಿ, ಹುಕ್ಕೇರಿ ಹಾಗೂ ಸಂಕೇಶ್ವರ ವ್ಯಾಪ್ತಿಯ ಗ್ರಾಮಗಳಲ್ಲಿ  ನಿರ್ಗತಿಕ ವಾತ್ಸಲ್ಯ ಕುಟುಂಬಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ  ತಿಂಗಳು ಅವರ ಜೀವನ ನಿರ್ವಹಣೆ ಹಾಗೂ ಅನಾರೋಗ್ಯದ ಸಂದರ್ಭದಲ್ಲಿ ಅನುಕೂಲವಾಗಲು ಮಾಸಾಶನ ಹಾಗೂ ವರ್ಷಕ್ಕೊಮ್ಮೆ ಮನೆ ಬಳಕೆಗೆ ಪಾತ್ರೆ ಪರಿಕರಗಳು, ಉಡುಗೆ ಹಾಗೂ ಹಾಸಿಗೆಗಳನ್ನು ನೀಡುವುದರ ಜೊತೆಗೆ, ತಾಲೂಕಿನ 3 ಗ್ರಾಮಗಳಲ್ಲಿರುವ ಮೂರು ಜನ ನಿರ್ಗತಿಕ ವಾತ್ಸಲ್ಯ ಫಲಾನುಭವಿಗಳಿಗೆ ವಾಸಿಸಲು ಸೂರು ಇಲ್ಲದ್ದರಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ  3 ಹೊಸ ಮನೆ ನಿರ್ಮಾಣ ಮಾಡಿ ಕೊಡಲಾಗಿದ್ದು, ಹಾಗೂ ಧರ್ಮಸ್ಥಳದ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರು ಸ್ವಾವಲಂಬಗೆ ಜೀವನ ನಡೆಸಲು ಅನುಕೂಲವಾಗುವಂತೆ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಹೊಲಿಗೆ ತರಬೇತಿಯಂತಹ ಕೌಶಲ್ಯ ಆಧಾರಿತ ತರಬೇತಿಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

     ಈ  ಸಂದರ್ಭದಲ್ಲಿ ಪಾಶ್ಚಾಪೂರ ವಿಭಾಗದ ಮೇಲ್ವಿಚಾರಕ ಚಂದ್ರಶೇಖರ ಹಲಸಗಿ, ಹುಕ್ಕೇರಿ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಿತಾ ವಿನಾಯಕ, ಗೌರವ್ವ ಕುಡಜೋಗಿ, ಅಕ್ಷತಾ ಸುಲಧಾಳ,  ಚಂದ್ರಕಲಾ ಹಿರೇಮಠ, ಲಲಿತಾ ಚಂದ್ರಪ್ಪಗೋಳ, ಬಸವ್ವ ಬೆಳವಿ ವಿದ್ಯಾಶ್ರೀ ಮುನ್ನೋಳಿ, ಸುನಿತಾ ಹಿರೇಮಠ, ಮುತ್ತಪ್ಪ ಕೀಳ್ಳಿಕೇತ್ರ, ಶೋಭಾ ಜಿಡ್ಡಿ ಉಪಸ್ಥಿತರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್