LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಘೋರ ಗುಡ್ಡ ಕುಸಿತ : ನಿಮ್ಮೊಂದಿಗೆ ನಾವಿದ್ದೇವೆ, ಕೇರಳಕ್ಕೆ ಸಿದ್ದರಾಮಯ್ಯ ಅಭಯ ಹಸ್ತ

ಬೆಂಗಳೂರು, ಜುಲೈ 31: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಘೋರ ಗುಡ್ಡ ಕುಸಿತದಲ್ಲಿ  ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಎನ್​ಡಿಆರ್​ಎಫ್​, ಸ್ಥಳೀಯ ಪೊಲೀಸರು ಮತ್ತು ಸೈನ್ಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿ​​ಗೆ ಕರೆ ಮಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಕ್ಷಣಾ ಕಾರ್ಯಾಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈಜೋಡಿಸಲಿದೆ. ರಕ್ಷಣಾ ತಂಡ, ಅಗತ್ಯ ಸಾಮಗ್ರಿ ಕಳುಹಿಸಲಾಗುತ್ತಿದೆ ಎಂದು ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದುರಂತದಲ್ಲಿ ಸಿಲುಕಿಕೊಂಡವರ ರಕ್ಷಣೆ ಸಂಬಂಧ ಸಚಿವ ಸಂತೋಷ್ ಲಾಡ್ ಅಧಿಕಾರಿಗಳ ಜೊತೆ ವಾಯನಾಡಿಗೆ ತೆರಳುತ್ತಿದ್ದು, ಮಧ್ಯಾಹ್ನದ ವೇಳೆಗೆ ವಾಯನಾಡ್​ಗೆ ತಲುಪಲಿದ್ದಾರೆ. ರೈಲು ದುರಂತದ ವೇಳೆ ಕೂಡ ​ಕನ್ನಡಿಗರ ರಕ್ಷಣೆಗಾಗಿ ಸಂತೋಷ್​ ಲಾಡ್ ಒಡಿಶಾಗೆ ತೆರಳಿದ್ದರು.

ಬೆಂಗಳೂರಿನಲ್ಲಿರುವ ಎನ್​ಡಿಆರ್​ಎಫ್​​ ತಂಡ ಹಾಗೂ ಮದ್ರಾಸ್​ ಎಂಜಿನಿಯರ್​ ಗ್ರೂಪ್​ ಸೇನಾ ಪಡೆಯ ತಂಡಗಳು ಈಗಾಗಲೆ ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್