LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ತಾಳಿಕೋಟೆಯಲ್ಲಿ ಜನಮನ ರಂಜಿಸಿದ ಗೀಗೀ ಪದಗಳು



ತಾಳಿಕೋಟೆ,ಜು,೨೦ : ತಾಳಿಕೋಟೆಯ ಶ್ರೀ ಗ್ರಾಮದೇವಿ ಜಾತ್ರಾಮಹೋತ್ಸವ ಅಂಗವಾಗಿ ೨.೩ ದಿನಗಳ ಕಾಲ ರಾಜವಾಡೆಯಲ್ಲಿ ಏರ್ಪಡಿಸಲಾದ ಗೀಗೀ ಪದಗಳು ವಿವಿಧ ರೀತಿಯ ಕಥೆಗಳನ್ನು ಪದಗಳಿಂದ ಹಾಡುವ ಮೂಲಕ ಅರ್ಥೈಯಿಸುವದರೊಂದಿಗೆ ಹಾಡಿಕೆಯ ಗೀಗೀ ಪದಗಳು ಅರ್ಥಪೂರ್ಣವಾಗಿ ಜನಮನ ಸೆಳೆದವು.
    ಈ ಗೀಗೀ ಪದಗಳ ಹಾಡಿಕೆಯ ತಂಡ ಬೆಳಗಾಂವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಣದಾಳದ ಮುಖ್ಯ ಗಾಯಕ ಲಕ್ಷ್ಮಣ ಕಣದಾಳ ಹಾಗೂ ಇನ್ನೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಲಬಾವಿ ಗ್ರಾಮದ ಮುಖ್ಯ ಗಾಯಕಿ ಶ್ರೀಮತಿ ರೇಖಾ ಗೋಲಭಾವಿ ಅವರ ಈ ಎರಡೂ ತಂಡಗಳ ನಡುವೆ ನಡೆದ ಸೆಣಸಾಟದ ಗೀಗೀ ಪದಗಳಲ್ಲಿ ಗಂಡು ಹೆಚ್ಚೋ ಹೆಣ್ಣು ಹೆಚ್ಚೋ ಹಾಗೂ ಭಕ್ತಿ ಚರಿತ್ರೆಯ ಹಾಡುಗಳನ್ನು ಹಾಡುವದರೊಂದಿಗೆ ಕೇಳುಗರ ಹಾಗೂ ನೋಡುಗರ ಜನಮನ ಸೆಳೆದವಲ್ಲದೇ         ಗ್ರಾಮೀಣ ಭಾಗದ ಜನಪದ ಕಲೆಗಳಲ್ಲಿ ಒಂದಾದ ಗೀ ಗೀ ಪದಗಳು ಇಂದಿಗೂ ತನ್ನದೇ ಆದ ಆಕರ್ಷಣೆಯನ್ನು ಉಳಿಸಿಕೊಂಡಿದ್ದು, ಜಾತ್ರೆಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದಂತಾಯಿತು.
       ಜಾತ್ರಾ ಮಹೋತ್ಸವಗಳಲ್ಲಿ ಇಂತಹ ಸಾಂಪ್ರದಾಯಿಕ ಕಲೆಗಳಿಗೆ ವೇದಿಕೆ ಕಲ್ಪಿಸಿಕೊಡುವುದರಿಂದ ನಮ್ಮ ನಶಿಸಿಹೋಗುತ್ತಿರುವ ಜನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ.
    ಗ್ರಾಮದೇವತೆಯ ಕೃಪೆಯಿಂದ ಇಡೀ ಸಮಾಜದಲ್ಲಿ ಸುಖ, ಶಾಂತಿ ನೆಲೆಸಲಿ ಎಂಬ ಆಶಯದೊಂದಿಗೆ ಜಾತ್ರೆಯ ಈ ದಿನದ ಈ ಗೀಗೀ ಪದದ ಸಾಂಸ್ಕೃತಿಕ ಸಂಭ್ರಮ ಯಶಸ್ವಿಯಾಗಿ ಇಂದು ಜರುಗಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್