LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಜ್ವಲ್ ಫಾರಿನ್‌ಗೆ ಹೋಗೋ ಮೋದಲು ಇವ್ರೇನು ಕತ್ತೆ ಕಾಯ್ತಿದ್ರಾ?

ಕಲಬುರಗಿ,24: ಪ್ರಜ್ವಲ್​ ರೇವಣ್ಣ ಪಾಸ್‌ಪೋರ್ಟ್​ ರದ್ಧತಿಗಾಗಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಪತ್ರ ಬರೆದ ವಿಚಾರವಾಗಿ ಕಲಬುರಗಿ ಏರ್‌ಪೋರ್ಟ್‌ನಲ್ಲಿ ಗುರುವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದರು. ಕಲಬುರಗಿಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್​ ಪರ ಮತಯಾಚಿಸಲು ಸಚಿವರು ಬಂದಿದ್ದರು.

"ಪ್ರಜ್ವಲ್​ ರೇವಣ್ಣ ಪೆನ್ ಡ್ರೈವ್ ಹೊರಬಂದಿದ್ದು ಏಪ್ರಿಲ್ 21ರಂದು. ಅವರು ವಿದೇಶಕ್ಕೆ ಹೋಗಿದ್ದು ಏ.27ರಂದು. ಹಾಗಾದರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದರಾ?. ಪಾಸ್‌ಪೋರ್ಟ್​ ರದ್ದುಪಡಿಸಲು ಅದರದೇ ಆದ ಪ್ರಕ್ರಿಯೆಗಳಿವೆ. ಡಿಪ್ಲೋಮ್ಯಾಟ್ ಪಾಸ್‌ಪೋರ್ಟ್ ರದ್ದತಿಗೆ ನ್ಯಾಯಾಲಯದಲ್ಲಿ ಕೇಸ್ ಫೈಲ್ ಮಾಡಲಾಗಿದೆ. ಹೊರದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರೊಸೆಸ್ ಇದೆ. ಭಾರತ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತಿದೆ. ರಾಜ್ಯ ಸರಕಾರಕ್ಕೆ ಸಹಕಾರ ನೀಡಲು ತಯಾರಿದೆ. ಇವರು ಪತ್ರ ಬರೆದ ತಕ್ಷಣ ಪಾಸ್‌ಪೋರ್ಟ್‌ ರದ್ದು ಆಗಬೇಕು ಅಂತಲ್ಲ, ಇದನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಕೇಳುವ ಪ್ರಶ್ನೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​, ಜಿ.ಪರಮೇಶ್ವರ್​ ಅವರಿಗೆ ಇದುವರೆಗೂ ಉತ್ತರ ಕೊಡಲು ಆಗುತ್ತಿಲ್ಲ. ಒಕ್ಕಲಿಗ ಸಮುದಾಯದ ಓಟ್ ಮೇಲೆ ಕಣ್ಣಿಟ್ಟು ಅಲ್ಲಿ ಚುನಾವಣೆ ಮುಗಿಯುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.ಇದು ಅತ್ಯಂತ ಗಂಭೀರ ಪ್ರಕರಣ. ಪ್ರಜ್ವಲ್ ವಿಚಾರಣೆ ಎದುರಿಸಲೇಬೇಕು. ಅವರು ತಪ್ಪು ಮಾಡಿದ್ದೇ ಆಗಿದ್ದರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲ. ಕರ್ನಾಟಕ ಸರಕಾರ ಇದರಲ್ಲಿ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡಹೊರಟಿದೆ"- ಪ್ರಹ್ಲಾದ್ ಜೋಶಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ