LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್


ಬಳ್ಳಾರಿ,ಜ20: ಅಂತರರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ನಗರದಲ್ಲಿ ಬೃಹತ್ ‘ನಡಿಗೆ ಜಾಥಾ’ (ವಾಕಥಾನ್) ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾಕ್ಕೆ ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ. ಫಣೇಂದರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಯೋಗದಿಂದ ದೇಹಕ್ಕೆ ಮತ್ತು ಮನಸ್ಸಿಗೆ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಸಕ್ಕರೆ ಕಾಯಿಲೆ (ಡಯಾಬಿಟಿಸ್) ಮತ್ತು ರಕ್ತದೊತ್ತಡದ (ಬಿಪಿ) ದಂತಹ ಸಮಸ್ಯೆಗಳನ್ನು ನಿಯಂತ್ರಿಸಲು ಯೋಗ ಅತ್ಯುತ್ತಮ ಮಾರ್ಗವಾಗಿದೆ. ಆರೋಗ್ಯಕರ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಜೂ.21 ರಂದು ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಆಧುನಿಕ ಜೀವನಶೈಲಿಯಲ್ಲಿ ಎದುರಾಗುವ ಒತ್ತಡ ಮತ್ತು ಆರೋಗ್ಯ ಸಮಸ್ಯೆಗಳಿಗೆ ಯೋಗ ಅತ್ಯುತ್ತಮ ಮದ್ದಾಗಿದೆ. ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರನ್ನು ಪ್ರೇರೇಪಿಸಲು ಈ ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಾಥಾವು ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭಗೊAಡು ಸಂಗA ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊAಡಿತು.
ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗ ಪಟುಗಳು, ಸಾರ್ವಜನಿಕರು ಹಾಗೂ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ‘ಆರೋಗ್ಯವೇ ಭಾಗ್ಯ’, ‘ದಿನವೂ ಮಾಡಿ ಯೋಗ, ದೂರವಿಡಿ ರೋಗ’ ಎಂಬ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆಯಲಾಯಿತು.
ಈ ವೇಳೆ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್