LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗಳಿಕೆ ರಜೆಗಾಗಿ ಸರ್ಕಾರಿ ನೌಕರರ ಸಂಘ ಚುನಾವಣಾ ಆಯೋಗಕ್ಕೆ ಪತ್ರ

ಬೆಂಗಳೂರು, ಮೇ 18: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಕ್ತಾಯಗೊಂಡಿದೆ. ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ಪೂರ್ಣಗೊಂಡಿದ್ದು, ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ ಸರ್ಕಾರಿ ನೌಕರರು ಚುನಾವಣಾ ಕಾರ್ಯವನ್ನು ಮುಗಿಸಿಕೊಂಡು ಕೆಲಸಕ್ಕೆ ಹಾಜರಾಗಿದ್ದಾರೆ. ಶಿಕ್ಷಕರ ಬೇಸಿಗೆ ರಜೆಗಳು ಮುಗಿಯುತ್ತಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ. ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರು ಈಗ ಚುನಾವಣಾ ಆಯೋಗದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ

ಗಳಿಕೆ ರಜೆ ನೀಡಲು ಕೋರಿ ಪತ್ರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಅವರು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಮತಗಟ್ಟೆ ಮಟ್ಟದ (ಬಿ.ಎಲ್.ಓ) ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವ ಬಗ್ಗೆ ಎಂಬ ವಿಷಯವನ್ನು ಪತ್ರ ಒಳಗೊಂಡಿದೆ. ಅಲ್ಲದೇ ಬಿ.ಎಲ್.ಓ. ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮನವಿ ದಿನಾಂಕ 14/4/2024 ಉಲ್ಲೇಖ ಮಾಡಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯಾದ್ಯಂತ ಕರ್ತವ್ಯ ಶಿಕ್ಷಕರು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ಚುನಾವಣಾ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವತ್ರಿಕ ರಜಾ ಅವಧಿಯಲ್ಲಿಯೂ ಸಹ ಕಾರ್ಯನಿರ್ವಹಿಸುತ್ತಿರುವುದರಿಂದ ಗೌರವಧನದ ಜೊತೆಗೆ ಗಳಿಕೆ ರಜೆಯನ್ನು ಮಂಜೂರು ಮಾಡುವಂತೆ ಉಲ್ಲೇಖಿತ ಪತ್ರದಲ್ಲಿ ಮನವಿ ಮಾಡಿಕೊಂಡಿರುತ್ತಾರೆ.

ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ಚುನಾವಣೆಗಳಿಗೆ ಪೂರಕವಾದ ಕರ್ತವ್ಯಗಳನ್ನು ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆಯನ್ನು ಮಂಜೂರು ಮಾಡುವ ಸಂಬಂಧ ಈ ಅಂಶಗಳನ್ನು ತಮ್ಮ ಅವಗಾಹನೆಗೆ ತರಬಯಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್