LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗಲಿವೆ : ಸಚಿವ ಸತೀಶ ಜಾರಕಿಹೊಳಿ

ಯರಗಟ್ಟಿ: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಈ ಯೋಜನೆಯಿಂದ ಯರಗಟ್ಟಿ ಭಾಗದ ಆಡಳಿತ ವ್ಯವಸ್ಥೆ ಮತ್ತ? ಬಲಗೊಳ್ಳಲಿದ್ದು, ಸಾರ್ವಜನಿಕರಿಗೆ ವಿವಿಧ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗಲಿವೆ. ವೇಗ, ಪಾರದರ್ಶಕತೆ ಹಾಗೂ ಜನಸ್ನೇಹಿ ಆಡಳಿತಕ್ಕೆ ಇದು ಸಹಕಾರಿಯಾಗಲಿದೆ. ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿ ನಿಗದಿತ ಸಮಯದಲ್ಲಿಯೇ ಪೂರ್ಣಗೊಳ್ಳಲಿದೆ ಎಂದರು.

ಯರಗಟ್ಟಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯೇ ಹೊಸ ತಾಲ್ಲೂಕು ಪಂಚಾಯಿತಿಯಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುವರು. ಆದ? ಬೇಗ ಅಧಿಕಾರಿಯನ್ನು ನೇಮಕ ಮಾಡಿಸಲಾಗುವುದು’ ಎಂದು ಸತೀಶ ಜಾರಕಿಹೊಳಿ ಹೇಳಿದರು.

ಪಟ್ಟಣದ ಪಟ್ಟಣದ ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಪಂಚಾಯಿತಿ ಆಡಳಿತ ಕಚೇರಿಯನ್ನು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿದರು.

ಶಾಸಕ ವಿಶ್ವಾಸ ವೈದ್ಯ  ಮಾತನಾಡಿ, ‘ಹೊಸ ತಾಲ್ಲೂಕಿನ ಗಡಿ ಭಾಗದೂ ಜನರಿಗೆ ಸರ್ಕಾರದ ಸವಲತ್ತು ಗಳು ಆದ? ಬೇಗ ಸಿಗಲೆಂಬ ಉದ್ದೇಶ, ತಾಲ್ಲೂಕಿನ ಆಡಳಿತವನ್ನು ಸುಗಮವಾಗಿ ನಡೆಸಲು ಹಂತ ಹಂತವಾಗಿ ಕಚೇರಿಗಳನ್ನು ತೆರೆಯಲಾಗುತ್ತಿದೆ. 

ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಇರುವ ಅವಳಿ ತಾಲ್ಲೂಕುಗಳನ್ನು ಸಮಾನವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಉದ್ದೇಶ’ ಎಂದರು.

ಇದೇ ವೇಳೆ ೮.೬೦ ಕೋಟಿ ವೆಚ್ಚದಲ್ಲಿ ಹೊಸ ವೆಚ್ಚದಲ್ಲಿ ಹೊಸ ಪ್ರಜಾ ಸೌಧ ಕಟ್ಟಡವನ್ನು ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಯಿತು. 

ಈ ವೇಳೆ ವಿಧಾನ ಪರಿ?ತ್ ಸದಸ್ಯ ಚನ್ನರಾಜ ಹಟ್ಟಿಹೊಳ್ಳಿ, ಯರಗಟ್ಟಿ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ, ಸವದತ್ತಿ ಮಲ್ಲಿಕಾರ್ಜುನ ಹೆಗ್ಗಣ್ಣವರ, ತಾ. ಪಂ. ಇಓ ಆನಂದ ಬಡಕುಂದ್ರಿ, ಪಿಡೆಬ್ಲೂಡಿ ಎಇಇ ವಿಜಯ ಸಂಗಪ್ಪನ್ನವರ, ಪಿ.ಆರ್.ಇ.ಡಿ. ಎಇಇ ಬಸವರಾಜ ಅಯ್ಯನಗೌಡರ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಸಿಪಿಐ ಐ. ಎಂ. ಮಠಪತಿ, ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನವರ, ಮಾಜಿ ತಾಪಂ ಸದಸ್ಯ ವಿಠ್ಠಲಗೌಡ ದೇವರಡ್ಡಿ, ಜಿಪಂ ಮಾಜಿ ಸದಸ್ಯ ಫಕ್ಕೀರಪ್ಪ ಹದ್ದನ್ನವರ, ಟಿಎಪಿಎಂಸಿ ಅಧ್ಯಕ್ಷ ರವೀಂದ್ರ ಯಲಿಗಾರ, ಮಾಜಿ ಮಹಿಳಾ ಕಾಂಗ್ರೇಸ್ ಅಧ್ಯಕ್ಷ ಕಲ್ಪನಾ ಜೋಶಿ, ಪ್ರಕಾಶ ವಾಲಿ, ನಿಖಿಲ ಪಾಟೀಲ, ಶಿವಾನಂದ ಪಟ್ಟಣಶೆಟ್ಟಿ, ಸಲೀಮಬೇಗ ಜಮಾದಾರ, ಹನಮಂತ ಹಾರುಗೊಪ್ಪ, ಬಾಸ್ಕರ ಹಿರೇಮೆತ್ರಿ, ಸಂತೋಷ ಚನ್ನಮೇತ್ರಿ, ಬಸವರಾಜ ಚನ್ನಮೇತ್ರಿ, ಸುರೇಶ ಭಜಂತ್ರಿ, ಪುಂಡಲೀಕ ಮೇಟಿ, ಗೌಡಪ್ಪ ಉದಪುಡಿ, ಮಲಿಕಸಾಬ ಬಾಗವಾನ, ಬಸವರಾಜ ಪೂಜೇರ, ಬಂಗಾರೆಪ್ಪ ಹರಳಿ, ಫಕ್ಕೀರಪ್ಪ ಕಿಲಾರಿ, ಮಂಜುನಾಥ ತಡಸಲೂರ,  ಸೇರಿದಂತೆ ಇತರರಿದ್ದರು.

ಬಾಕ್ಸ್ : ಈಗಾಗಲೇ ಪೂರ್ಣ ಪ್ರಮಾಣದಲ್ಲಿ ತಾಲೂಕು ತಹಸೀಲ್ದಾರ ಕಚೇರಿ, ಪೊಲೀಸ್ ಠಾಣೆ ಹಾಗೂ ಅಗ್ನಿ ಶಾಮಕ ಕಛೇರಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿವೆ. ತಾಲೂಕು ಕೋರ್ಟ್‌ಗೆ, ಪಟ್ಟಣ ಪಂಚಾಯತಿ ನೂತನ ಕಟ್ಟಡಕ್ಕೆ ಜಾಗ ಮಂಜೂರಾಗಿದ್ದು, ಶೀಘ್ರದಲ್ಲಿ ಕಟ್ಟಡ ನಿರ್ಮಾಣಕ್ಕೆ ಪೂಜೆ ನೆರವೇರಿಸಲಾಗುತ್ತಿದೆ. ಈ ಭಾಗದ ಸಮಗ್ರ ಅಭಿವೃದ್ಧಿ ಬದ್ಧರಾಗಿ ಕೆಲಸ ಮಾಡುತ್ತಿದ್ದೇನೆ.

ವಿಶ್ವಾಸ ವೈದ್ಯ, ಶಾಸಕರು ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ