LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೃಷ್ಣಾ ಮೇಲ್ದಂಡನೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧ : ಡಿ.ಕೆ.ಶಿವಕುಮಾರ

ಬೆಳಗಾವಿ ಡಿ., ೦೯- ಯಾವೂದೋ ಮೂಲದಿಂದ ಹಣದ ವ್ಯವಸ್ಥೆ ಮಾಡಿಕೊಂಡು ಕೃಷ್ಣಾ ಮೇಲ್ದಂಡನೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕೆ ಕೇಂದ್ರದಿಂದ ಅಧಿಸೂಚನೆ ಹೊರಡಿಸಬೇಕಾಗಿದೆ. ಆದ್ದರಿಂದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡದ ತಂದು ಅಧಿಸೂಚನೆ ಮಾಡಿಸಬೇಕು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಹೇಳಿದರು.

ವಿಧಾನಸಭೆಯಲ್ಲಿಂದು ಶಾಸಕ ಯತ್ನಾಳ ಅವರು ಎತ್ತಿದ ಪ್ರಶ್ನೆಗೆ ಉತ್ತರಿಸುತ್ತಾ ನಾನು ಅನೇಕ ಸಭೆಗಳನ್ನು ಕರೆದು ವಿ.ಸೋಮಣ್ಣವರೊಂದಿಗೆ ಕೇಂದ್ರ ಸಚಿವರನ್ನು ಬೇಟಿಯಾಗಿದ್ದೇವೆ. ೨೦೧೩ ರಿಂದ ಇಲ್ಲಿಯವರೆಗೆ ಅವಾರ್ಡ ಪಾಸ ಆಗ್ತಾಇಲ್ಲ. ಈ ಯೋಜನೆ ಕೈಗೊಳ್ಳಲು ನಾವು ಈಗಾಗಲೇ ಯೋಜನೆಯನ್ನು ಹಾಕಿಕೊಂಡಿದ್ದೆವೆ. ವರ್ಷಕ್ಕೆ ೧೫-೨೦ ಸಾವಿರ ನೀಡಬೇಕೆಂದು, ಮೂರ್ನಾಲ್ಕು ವರ್ಷದಲ್ಲಿ ಭೂ ಸ್ವಾಧೀನ ಪೂರ್ಣಗೊಳಿಸಬೇಕೆಂದು ಕಾಯ ಆರಂಭಿಸಿದ್ದೇವೆ. ನೀವು ಕೇಂದ್ರದ ಮೇಲೆ ಒತ್ತಡ ಹಾಕಿ ಅಧಿಸೂಚನೆ ಹೊರಡಿಸಿದರೆ, ಶೀಘ್ರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದರು.



ಹಳೆಯ ಭೂಸ್ವಾಧೀನದ ಐದು ಸಾವಿರಕ್ಕೂ ಹೆಚ್ಚು ಪ್ರಕರಣಗಳಿದ್ದು, ಆ ರೈತರ ಹಣ ಪಾವತಿಸಲು ಶಾಸಕ ಬಸನಗೌಡಪಾಟೀಲ ಯತ್ನಾಳ ಆಗ್ರಹಿಸಿದರು. ಅಧಿಕಾರಿಗಳು ಮತ್ತು ವಕೀಲರೊಂದಿಗೆ ಶಾಮಿಲಾಗಿ ಪರಿಹಾರ ಮೊತ್ತನ್ನು ಹೆಚ್ಚಿಸಿಕೊಂಡರೆ, ಅದಕ್ಕೆಲ್ಲ ಸರ್ಕಾರ ಸೊಪ್ಪು ಹಾಕಲ್ಲ ಎಂದು ಸಚಿವರು ಉತ್ತರಿಸಿದರು. ಇದಕ್ಕೆ ಆಕ್ರೋಶಗೊಂಡ ಯತ್ನಾಳ ನ್ಯಾಯ್ಯಾಲಯದ ಆದೇಶಕ್ಕು ಬೆಲೆನೀಡುವುದಿಲ್ಲ ಎಂಬಂತಹ ಉತ್ತರ ಸರಿಯಲ್ಲ ಎಂದು ಸದನದಿಂದ ಹೊರನಡೆಯುವದಾಗಿ ಹೇಳಿ ನಿರ್ಗಮಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ