LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಸ್​​ಗಳ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆಗೆ ಸರ್ಕಾರ ಖಡಕ್‌ ಸೂಚನೆ

ಬೆಂಗಳೂರು, ಅಕ್ಟೋಬರ್ 27: ಆಂಧ್ರ ಪ್ರದೇಶದ ಕರ್ನೂಲ್​ನಲ್ಲಿ ಖಾಸಗಿ ಬಸ್ ದುರಂತದಲ್ಲಿ 20 ಜನರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಘೋರ ದುರಂತದ ಬೆನ್ನಲ್ಲೇ ಕರ್ನಾಟಕ  ಸಾರಿಗೆ ಇಲಾಖೆ ಕೂಡ ಎಚ್ಚೆತ್ತುಕೊಂಡಿದೆ. ರಾಜ್ಯದ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಖಡಕ್ ಸೂಚನೆ ಕೊಟ್ಟಿದ್ದಾರೆ. ಬಸ್​​ಗಳ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆಗೆ ಸೂಚನೆ ನೀಡಿದ್ದಾರೆ.



ಕೆಎಸ್ಆರ್​​​ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಎಂಡಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನ್ಯೂನತೆ ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲೂ ಹಲವು ಡಕೋಟಾ ಬಸ್​​ಗಳಿವೆ. ಸಾರಿಗೆ ಸಚಿವರ ಖಡಕ್ ಎಚ್ಚರಿಕೆ ಬಳಿಕವಾದರೂ, ರಾಜ್ಯದಲ್ಲಿ ಸಾರಿಗೆ ಬಸ್ ಅವಘಡಗಳು, ದುರಂತಗಳು ಕಡಿಮೆಯಾಗಲಿವೆಯೇ ಎಂಬುದನ್ನು ಕಾದುನೋಡಬೇಕಿದೆ.

ಅಕ್ಟೋಬರ್ 24 ರ ಶುಕ್ರವಾರ ಮುಂಜಾನೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ವಿ. ಕಾವೇರಿ ಟ್ರಾವೆಲ್ಸ್​​ಗೆ ಸೇರಿದ್​ದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಬೈಕ್​ಗೆ ಗುದ್ದಿ ಅಪಘಾತಕ್ಕೀಡಾಗಿ ಅದರಲ್ಲಿದ್ದ ಕನಿಷ್ಠ 20 ಜನರು ಸಾವನ್ನಪ್ಪಿದ್ದರು. ಇಬ್ಬರು ಚಾಲಕರು ಸೇರಿದಂತೆ 27 ಜನರು ದುರಂತದಿಂದ ಬಚಾವಾಗಿದ್ದರು.

ಆಂಧ್ರ ಪ್ರದೇಶದಲ್ಲಿ ಸಂಭವಿಸಿದ ಬಸ್ ದುರಂತದ ನಂತರ ಕರ್ನಾಟಕದಲ್ಲಿಯೂ ಸಾರಿಗೆ ಬಸ್​ಗಳ ಬಗ್ಗೆ ಕಳವಳ ವ್ಯಕ್ತವಾಗಿತ್ತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿಯೂ ಹಲವು ಡಕೋಟಾ ಬಸ್​ಗಳಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ತಕ್ಷಣವೇ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸಾರಿಗೆ ಸಚಿವರು ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್