Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಪಂ ಸಿಇಒ ರಿಷಿ ಆನಂದ ಸಿಬ್ಬಂದಿಗೆ ಕಿವಿಮಾತು

ಗ್ರಾಮೀಣ ಜನತೆಗೆ ತ್ವರಿತವಾಗಿ ಸ್ಪಂದಿಸಿ

ವಿಜಯಪುರ, ಮೇ.೧೪: ಸಮಸ್ಯೆ ಹೊತ್ತು ಬರುವ ಗ್ರಾಮೀಣ ಜನತೆಗೆ ತ್ವರಿತವಾಗಿ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಕಾಧಿರಿ ರಿಷಿ ಆನಂದ ಹೇಳಿದರು.
ಜಿಲ್ಲೆಯ ತಿಕೋಟಾ ತಾಲೂಕು ಪಂಚಾಯತಿ ಕಾರ್ಯಾಲಯದ ನವೀಕರಣಗೊಂಡ ಪಿಠೋಪಕರಣ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಾಲಯವು ಎಷ್ಟು ನಿಟ್ಟಾಗಿ ಅಚ್ಚುಕಟ್ಟಾಗಿ ಹಾಗೂ ಸ್ವಚ್ಚತೆಯಿಂದ ಇರುತ್ತದೇಯೋ ಅಷ್ಟು ಸಿಬ್ಬಂದಿಗಳಿಗೆ ಕೆಲಸ ನಿರ್ವಹಿಸಲು ಪ್ರೇರಣೆ ಸಿಗುತ್ತದೆ. ಇಂತಹ ಒಂದು ಉತ್ತಮ ಯೋಜನೆಯನ್ನು ಹಾಕಿಕೊಂಡು ಹಳೆಯ ಕಟ್ಟಡದಲ್ಲಿಯೇ ಸಿಬ್ಬಂದಿಗೆ ಅವಶ್ಯಕವಾಗಿ ಬೇಕಾಗಿರುವ ಟೇಬಲ್, ಕುರ್ಚಿ, ಗಣಕಯಂತ್ರ, ಪ್ರಿಂಟರ್ಸ್, ಶೌಚಾಲಯ, ಕುಡಿಯುವ ನೀರು ಮತ್ತು ಉತ್ತಮ ಪರಿಸರ ಓದಗಿಸಿರುವ ತಾಲೂಕು ಪಂಚಾಯತಿಯ ಕಾರ್ಯವನ್ನು ಸಿಇಒ ಪ್ರಶಂಸಿಸಿದರು.
ಮುಂದಿನ ದಿನಮಾನದಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಇನ್ನೂ ಹೆಚ್ಚಿನ ಉತ್ಸಾಹದಿಂದ ಕೆಲಸ ನಿರ್ವಹಿಸಿ ತಿಕೋಟಾ ತಾಲೂಕನ್ನು ಮಾದರಿ ತಾಲೂಕನ್ನಾಗಿಸಲು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮಗೆ ಒದಗಿಸಿರುವ ಸಲಕರಣೆಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ಸಮಸ್ಯೆ ಹೊತ್ತು ಬರುವ ಗ್ರಾಮೀಣ ಜನರಿಗೆ ಸೂಕ್ತ ಪರಿಹಾರವನ್ನು ತ್ವರಿತವಾಗಿ ಒದಗಿಸಬೇಕು. ಜೊತೆಗೆ ಅವರೊಡನೆ ಅತ್ಯಂತ ಗೌರವಯುತವಾಗಿ ವರ್ತಿಸಬೇಕು ಎಂದರು.
ನಮ್ಮ ಕಾರ್ಯಾಲಯದ ಬಗ್ಗೆ ನಮಗೆಲ್ಲಾ ಹೆಮ್ಮೆಯಿರಬೇಕು. ಜೊತೆಗೆ ಕಾರ್ಯಾಲಯದ ಸ್ವಚ್ಛತೆಗೆ ಎಲ್ಲರೂ ಸಹಕರಿಸಬೇಕು. ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿಗಳೂ ಸಹ ಜನಸ್ನೇಹಿ ಹಾಗೂ ಸಿಬ್ಬಂದಿಗಳ ಸ್ನೇಹಿಯಾಗಿ ನಿರ್ಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ, ತಾಲೂಕು ಪಂಚಾಯತಿಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತರಾಯಗೌಡ ಬಿರಾದಾರ, ಸಹಾಯಕ ಲೆಕ್ಕಾಧಿಕಾರಿಗಳಾದ ಅನ್ವರಹುಸೇನ ನದಾಫ್, ತಾಲೂಕು ಯೋಜನಾಧಿಕಾರಿಗಳಾದ ಮಹಾಂತೇಶ ಬಾಗೇವಾಡಿ, ಸಹಾಯಕ ನಿರ್ದೇಶಕರುಗಳಾದ ಶೋಭಕ್ಕ ಶಿಳೀನ, ಬಸವರಾಜ ಸಂಕಗೊಂಡ ಸೇರಿದಂತೆ ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ತಾಲೂಕು ಐಇಸಿ ಸಂಯೋಜಕರಾದ ಕಲ್ಲಪ್ಪ ನಂದರಗಿ ನಿರೂಪಿಸಿದರು. ಪಿಡಿಓ ಶ್ರೀಶೈಲ ಹಡಪದ ಸ್ವಾಗತಿಸಿದರು. ಸರ್ವಮಂಗಲಾ ಮುಪ್ಪಯ್ಯನಮಠ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿವೃತ್ತಿ ಹೊಂದಿದ ಮಹಾದೇವ ವಾಜಂತ್ರಿ ಅವರನ್ನು ಸನ್ಮಾನಿಸಲಾಯಿತು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*