LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಳೆ ಕೆಂಭಾವಿಯಲ್ಲಿ ಷರತ್ತುಬದ್ಧ ಆರ್​ಎಸ್​ಎಸ್​ ಪಥಸಂಚಲನಕ್ಕೆ ಗ್ರೀನ್​ ಸಿಗ್ನಲ್

ಯಾದಗಿರಿ:  ಕೆಂಭಾವಿ ಪಟ್ಟಣದ ಪುರಸಭೆ ಮುಂಭಾಗದಿಂದ ಆರಂಭವಾಗಿ, ಪಟ್ಟಣದ ಪ್ರಮುಖ ಬೀಡಿಗಳಲ್ಲಿ ಸಂಚರಿಸುವ ಈ ಪಥಸಂಚಲನವು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಂದರ್ಭದ ಭಾಗವಾಗಿದೆ. ಆದರೆ ಈ ಅನುಮತಿಯು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಷರತ್ತುಗಳೊಂದಿಗೆ ನೀಡಲಾಗಿದೆ  ಆರ್ಎಸ್ಎಸ್​ ಪಥಸಂಚಲನ ಮಂಗಳವಾರ ಬೆಳಿಗ್ಗೆ 9:30ಕ್ಕೆ ಕೆಂಭಾವಿ ಪುರಸಭೆ ಮುಂಭಾಗದಿಂದ ಆರಂಭವಾಗಿ, ಪಟ್ಟಣದ ಮುಖ್ಯ ಬೀಡಿಗಳಾದ ರೈಲ್ವೇ ಸ್ಟೇಷನ್ ರಸ್ತೆ, ಮಾರುಕಟ್ಟೆ ಬೀಡಿ ಮತ್ತು ಗ್ರಾಮ ಪಂಚಾಯಿತಿ ಬಳಿಯವರೆಗೆ ಸಂಚರಿಸುತ್ತದೆ. ಸುಮಾರು 500 ಸ್ವಯಂಸೇವಕರು ಭಾಗವಹಿಸಲಿದ್ದಾರೆ ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ. ಇದು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಮಾರಂಭದ ಭಾಗವಾಗಿದ್ದು, ರಾಜ್ಯದಾದ್ಯಂತ ಇಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೂ ಹಿಂದಿನ ಘಟನೆಗಳಲ್ಲಿ ಇಂತಹ ಮಾರ್ಚ್‌ಗಳು ವಿವಾದಕ್ಕೆ ಕಾರಣವಾಗಿವೆ, ಆದ್ದರಿಂದ ಜಿಲ್ಲಾಡಳಿತವು ಎಚ್ಚರಿಕೆಯಿಂದ ನಿರ್ಧರಿಸಿದೆ.

ಇನ್ನೂ  ಆರ್ಎಸ್ಎಸ್​​ ಪಥಸಂಚಲನಕ್ಕೆ ಅನುಮತಿಯ ಷರತ್ತುಗಳು ಕಟ್ಟುನಿಟ್ಟಾಗಿವೆ. ಮೊದಲು, ಪಥಸಂಚಲನದಲ್ಲಿ ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಉಂಟಾದರೆ, ಸಂಘಟನೆಯ ಮುಖಂಡರು ಸಂಪೂರ್ಣ ಖರ್ಚು ಭರಿಸಬೇಕು. ಎರಡನೇ, ಪೊಲೀಸ್ ಇಲಾಖೆ ನಿಗದಿಪಡಿಸಿದ ಮಾರ್ಗದಲ್ಲಿಯೇ ಸಂಚಲನ ನಡೆಸಬೇಕು. ಸಂಘಟನೆಯವರು ಪೊಲೀಸ್ ಭದ್ರತೆಯನ್ನು ಸ್ವೀಕರಿಸಬೇಕು. ಮೂರನೇ, ಯಾವುದೇ ಜಾತಿ, ಧರ್ಮ ಅಥವಾ ಸಮುದಾಯಕ್ಕೆ ನೋವುಂಟು ಮಾಡುವ ಘೋಷಣೆಗಳು ಅಥವಾ ಕೂಗುಗಳು ಇರಬಾರದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್