LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್

ಹುಬ್ಬಳ್ಳಿ, ಸೆ.03: ವಿವಾದಿತ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅನುಮತಿ ನೀಡಿದೆ. ಈ ಕುರಿತು ಹುಬ್ಬಳ್ಳಿಯ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದು, ಮೂರು ದಿನಗಳ ಕಾಲ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ.

ಇನ್ನು ಕಳೆದ ವರ್ಷ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಸುದ್ದಿಯಾಗಿತ್ತು. ಈ ವರ್ಷ ಪ್ರತಿಷ್ಠಾಪನೆಗೆ 4 ರಿಂದ 5 ಸಂಘಟನೆಗಳು ಅರ್ಜಿ ಸಲ್ಲಿಸಿತ್ತು. ಈ ಹಿನ್ನಲೆ ಪಾಲಿಕೆ ಕೆಲ ಷರತ್ತು ವಿಧಿಸಿ 3 ದಿನಗಳ ಕಾಲ ಅನುಮತಿ ನೀಡಿದೆ.

ಈ ಕುರಿತು ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಶಾಂತಿ ಸಭೆಯಲ್ಲಿ ಮಾತನಾಡಿದ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ, ‘ ನಂಬಿಕೆ ಆಧಾರದ ಮೇಲೆ ಗಣೇಶ ಉತ್ಸವ ಆಚರಣೆ ಮಾಡೋಣ. ಮೊದಲು ಮನುಷ್ಯ ಆಗಬೇಕು, ಆ ಮೇಲೆ ಹಿಂದೂ ಆಗಬೇಕು. ಮೊದಲು ಮಾನವ, ಆ ಮೇಲೆ ಮುಸ್ಲಿಂ, ಶಿಖ್ ಆಗಬೇಕು ಎಂದರು.


ನಾವೆಲ್ಲರೂ ಶಾಂತಿಯಿಂದ ಹಬ್ಬ ಮಾಡೋಣ. ಕಳೆದ ನಾಲ್ಕು ತಿಂಗಳ ಹಿಂದೆ ಹು-ಧಾ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇರಲಿಲ್ಲ. ಆ ಸಮಯದಲ್ಲಿ ‌ಹುಬ್ಬಳ್ಳಿ ಧಾರವಾಡಕ್ಕೆ ಕೆಟ್ಟ ಹೆಸರು ಬಂದಿತ್ತು. ಇದೀಗ ಹೊಸ ಪೊಲೀಸ್ ಕಮೀಷನರ್ ಒಳ್ಳೆ ಕೆಲಸ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಹೇಳಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್