LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ : ಪ್ಯಾಟಿಮಠ

ಬೀಳಗಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮಾತ್ರವೇ ತಲುಪುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಮನ ಹರಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ  ಅಣವೀರಯ್ಯ ಪ್ಯಾಟಿಮಠ ಹೇಳಿದರು.
ತಾಲ್ಲೂಕಾ ಗ್ಯಾರಂಟಿ ಸಭಾ ಭವನದಲ್ಲಿ ಮಂಗಳವಾರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಈಗಾಗಲೆ ಸ್ಪಷ್ಟಪಡಿಸಿದ್ದಾರೆ. ನಕಲಿ ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚುವ ಕೆಲಸ ರಾಜ್ಯದಾದ್ಯಂತ ನಡೆಯುತ್ತಿದೆ ಎಂದರು.
ಮೃತವ್ಯಕ್ತಿಗಳ ಹೆಸರಿನಲ್ಲಿಯೂ ಸಹ ಕೆಲವರು ಹಣ ಪಡೆಯುತ್ತಿರುವುದು ಈಗಾಗಲೆ ಪತ್ತೆಯಾಗಿದೆ. ಜಿಎಸ್‌ಟಿ ತೆರಿಗೆ ಪಾವತಿದಾರರು, ಶ್ರೀಮಂತರೂ ಸಹ ಯೋಜನೆ ಲಾಭ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆ ದುರುಪಯೋಗ ತಡೆಯಲು ಅಧಿಕಾರಿಗಳು ಹಾಗೂ ನೌಕರರು ಮನೆಮನೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸರ್ಕಾರ ಆದೇಶ ಜಾರಿಗೊಳಿಸಿದೆ. ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಅನುಷ್ಠಾನಕ್ಕೆ ತರುವ ಗುರುತರ ಜವಾಬ್ದಾರಿ ಹೊಂದಿದ್ದಾರೆ ಎಂದರು.
ಫಲಾನುಭವಿಗಳು ಕರ್ನಾಟಕದ ನಿವಾಸಿ ಆಗಿರಬೇಕು.ಬೇರೆ ರಾಜ್ಯದ ನಿವಾಸಿಗಳು ಗ್ಯಾರಂಟಿ ಯೋಜನೆ ಫಲಾನುಭವಿಗಳಾಗಿದ್ದರೆ ಅಂತವರನ್ನು ಗುರುತಿಸಿ ಅನರ್ಹಗೊಳಿಸಬೇಕು ಎಂದು ತಿಳಿಸಿದರು.
'ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ 736 ಮೃತಪಟ್ಟ ಪ್ರಕರಣಗಳು ಪತ್ತೆಯಾಗಿದ್ದು, ಅಂತಹ ಅನರ್ಹ ಖಾತೆಗಳನ್ನು ಗುರುತಿಸಿ ಯೋಜನೆಗಳ ಪರಿಷ್ಕರಣೆ ಕಾರ್ಯವನ್ನು ಚುರುಕುಗೊಳಿಸಲಾಗುವುದು  ಎಂದು 
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಬಿ.ಜಿ. ಕವಟೇಕರ ಹೇಳಿದರು.
'ಗೃಹಜ್ಯೋತಿ ಯೋಜನೆಯಡಿ ಕೆಲವೆಡೆ ಗೃಹ ಬಳಕೆಯ ಹೆಸರಿನಲ್ಲಿ ವಾಣಿಜ್ಯ ಬಳಕೆ ಮಾಡುತ್ತಿರುವುದು ಕೇಳಿ ಬರುತ್ತಿದ್ದು ಅಂತಹ ಪ್ರಕರಣಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೆಸ್ಕಾಂ ವಿಭಾಗದ ಎಇಇ ಮಂಜುನಾಥ ಬೋಕಿ ಸಭೆಗೆ ತಿಳಿಸಿದರು.
ಆಹಾರ ಇಲಾಖೆಯ ಎ.ಎಲ್.ಸನದಿ, ಸಾರಿಗೆ ಇಲಾಖೆಯ ಮಾಹಾಂತೇಶ ಬಿರಾದಾರ ಸಭೆಗೆ ಇಲಾಖೆಗಳ ಮಾಹಿತಿ ಒದಗಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ  ಹನಮಂತ ಸೂಳಿಕೇರಿ,  ರಸೂಲ್ ಮುಜಾವರ,ಚಂದ್ರಶೇಖರ ಪಂಡರಿ, ಎಂ.ಆ‌ರ್. ಪಾಟೀಲ, ವೆಂಕನಗೌಡ ಪಾಟೀಲ,ನಾರಾಯಣ ಕಂಬಾರ,ಮುತ್ತು ಲಮಾಣಿ, ಸದಾಶಿವ ಜುಂಜೂರಿ, ರೇಖಾ ಕಟ್ಟೆಪ್ಪನವರ ಇದ್ದರು.
ಬೀಳಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ  ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಹಾಗೂ ಸದಸ್ಯರು ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್