LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೇ 30ರಂದು ‘ಹಾಸನ ಚಲೋ’ ಆಂದೋಲನ

ಬೆಂಗಳೂರು: ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಮೇ 30ರಂದು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಆಂದೋಲನಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ಸೂಚಿಸಿದೆ.

ಈ ಕುರಿತು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ವಿವರಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು, “ನಾವೆದ್ದು ನಿಲ್ಲದಿದ್ದರೆ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಕಾಳಜಿಯುಳ್ಳ ಎಲ್ಲ ಸಂಘಟನೆಗಳ, ವ್ಯಕ್ತಿಗಳ ಜಂಟಿವೇದಿಕೆಯಾಗಿದೆ. ಮೇ 30ರಂದು ‘ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಕಾರ್ಯಕ್ರಮವನ್ನು ಬೆಂಬಲಿಸುವುದಾಗಿ ತಿಳಿಸಿದೆ.

ಬೃಹತ್ ಸಾರ್ವಜನಿಕ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಭಾಗಗಳಿಂದ ಮಹಿಳಾ, ದಲಿತ, ಕಾರ್ಮಿಕ, ರೈತ, ವಿದ್ಯಾರ್ಥಿ, ಯುವಜನರ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಲಿಂಗತ್ವ ಅಲ್ಪಸಂಖ್ಯಾತರ, ಆದಿವಾಸಿಗಳ ಮತ್ತು ಇನ್ನಿತರ ಹಲವು ಸಂಘಟನೆಗಳ ಪ್ರತಿನಿಧಿಗಳು, ಹಾಗೆಯೇ ರಾಜ್ಯದ ಮತ್ತು ದೇಶದ ಕೆಲವೆಡೆಗಳಿಂದ ಚಿಂತಕರು, ಬರಹಗಾರರು, ಬುದ್ಧಿಜೀವಿಗಳು, ಕಲಾವಿದರು, ನಿವೃತ್ತ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಮುಂತಾದ ಸುಮಾರು 10,000ದಷ್ಟು ಮಂದಿ ಭಾಗವಹಿಸಲಿದ್ದಾರೆ.

ಈ ಪ್ರತಿಭಟನೆಯ ಉದ್ದೇಶವು, ಪ್ರಜ್ವಲ್ ರೇವಣ್ಣನ ಕ್ರಿಮಿನಲ್ ಲೈಂಗಿಕ ಹಿಂಸಾಚಾರದ ಬಲಿಪಶುಗಳಾದ ಸಾವಿರಾರು ಮಹಿಳೆಯರಿಗೆ ಸ್ಥೆರ್ಯ ತುಂಬಿ ಬಹಿರಂಗವಾಗಿ ಮತ್ತು ಒಗ್ಗಟ್ಟಾಗಿ ಅವರ ಘನತೆಯನ್ನು ಎತ್ತಿಹಿಡಿಯುವುದರ ಜೊತೆಗೆ ಈ ಕೆಳಗಿನ ವಿಷಯಗಳಿಗಾಗಿ ಒತ್ತಾಯಿಸುವುದೂ ಕೂಡಾ ಆಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ