LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್: ನಟಿ ರಮ್ಯಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣವನ್ನು ಬಹಿರಂಗವಾಗಿ ಖಂಡಿಸಿದ ಕೆಲವೇ ಕೆಲವರಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಕೂಡ ಒಬ್ಬರು.

ದರ್ಶನ್ ಬಂಧನ ವಿಚಾರದಲ್ಲಿ ಪೊಲೀಸರು ಯಾವುದೇ ಪ್ರಭಾವ, ಆಮಿಷಕ್ಕೆ ಒಳಗಾಗದೆ ಸರಿಯಾಗಿ ಕೆಲಸ ಮಾಡಿ ಪ್ರಕರಣದಲ್ಲಿ ಅಮಾಯಕ, ಮುಗ್ಧರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

ಇದೀಗ ಇಂದು ಮತ್ತೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪ್ರಕರಣ ಬಗ್ಗೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಪ್ರಕರಣಗಳಲ್ಲಿ ಕಾನೂನು ಮುರಿದವರು ಶ್ರೀಮಂತರು, ಶಕ್ತಿಶಾಲಿಗಳು ಮತ್ತು ಪ್ರಭಾವಿ ವ್ಯಕ್ತಿಗಳಾಗಿದ್ದರು. ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಲಿಯಾದವರು ಬಡವರು, ಮಹಿಳೆಯರು ಮತ್ತು ಮಕ್ಕಳು, ಜನಸಾಮಾನ್ಯರು.

ಕರ್ನಾಟಕದಲ್ಲಿ ಇತ್ತೀಚೆಗೆ ಇಂತಹ ಅಪರಾಧ ಪ್ರಕರಣಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ಇಂತಹ ಪ್ರಕರಣಗಳಲ್ಲಿ ವಿಚಾರಣೆಯನ್ನು ತ್ವರಿತಗೊಳಿಸಿದಾಗ ಅವುಗಳ ತಾರ್ಕಿಕ ಹಂತಕ್ಕೆ ತೆಗೆದುಕೊಂಡು ಹೋಗಿ ನ್ಯಾಯ ನೀಡಬಹುದು. ಇಂತಹ ಪ್ರಕರಣಗಳಲ್ಲಿ ನ್ಯಾಯವು ಮೇಲುಗೈ ಸಾಧಿಸದಿದ್ದರೆ, ಸಾರ್ವಜನಿಕರಿಗೆ ಯಾವ ಸಂದೇಶ ನೀಡಲು ಸಾಧ್ಯ ಎಂದು ಪ್ರಜ್ವಲ್ ರೇವಣ್ಣ, ನಟ ದರ್ಶನ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸೂರಜ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್