LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿದ್ದರಾಮಯ್ಯ ದುರಹಂಕಾರಕ್ಕೆ ’ಲೋಕ’ ಕದನದಲ್ಲಿ ತಕ್ಕ ಉತ್ತರ: ಹೆಚ್‌ಡಿ ದೇವೇಗೌಡ

ಹಾಸನ,ಏ.01: ಜೆಡಿಎಸ್ ಪಕ್ಷದಲ್ಲೆ ಬೆಳೆದು ಮತ್ತೆ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕರೆ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.

ಹಾಸನ ತಾಲೂಕಿನ ಸಾಲಗಾಮೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ನಮ್ಮ ಪಕ್ಷದಲ್ಲೇ ಬೆಳೆದು ಈಗ ಅಧಿಕಾರದ ಅಹಂನಿಂದ ಬಾಯಿಗೆ ಬಂದಂತೆ ಮಾತನಾಡುವ ಜತೆಗೆ ಹಾಸನಕ್ಕೆ ಮೂರು ಬಾರಿ ಬಂದು ಪ್ರಜ್ವಲ್ ಸೋಲಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರಿಗೆ ಈ ಬಾರಿ ಮುಖಭಂಗ ಮಾಡುವ ಕೆಲಸವನ್ನು ನನ್ನ ಜಿಲ್ಲೆಯ ಜನರು ಮಾಡಬೇಕಿದೆ’ ಎಂದು ಹೇಳಿದರು.

‘ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಸಲುವಾಗಿ ಕೇಂದ್ರ ಹಣ ನೀಡುತ್ತಿಲ್ಲ ಎಂದು ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಧಾವೆ ಹೂಡಿದೆ, ಪ್ರಬಲವಾದ ಪ್ರಧಾನಿ ದೇಶಕ್ಕೆ ಇರಬಾರದು ಎಂಬ ಹೇಳಿಕೆ ನೀಡಿದ್ದಾರೆ. ಪ್ರಬಲವಾದ ಪ್ರಧಾನ ಮಂತ್ರಿ ಇದ್ದರೆ ಇವರು ಕೇಳಿದಂತೆ ಹಣ ನೀಡುವುದಿಲ್ಲ ಎಂದು ಈ ರೀತಿ ಹೇಳಿದ್ದಾರೆ’ ಎಂದು ದೂರಿದರು. ‘ದೇಶದ ಆಡಳಿತ ವ್ಯವಸ್ಥೆಯಲ್ಲಿ ಫೈನಾನ್ಸ್ ಕಮಿಷನ್ ಪ್ರತಿ ರಾಜ್ಯದ ಆರ್ಥಿಕ ಸ್ಥಿತಿ ಗತಿಗಳ ಬಗ್ಗೆ ಪರಿಶೀಲನೆ ನಡೆಸಿ ಆರ್ಥಿಕ ಸಮಸ್ಯೆ ಹೊಂದಿರುವ ಹಣವನ್ನು ಒದಗಿಸುವ ಕೆಲಸವನ್ನು ಮಾಡುತ್ತದೆ. ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡು ತಮ್ಮ ಬಳಿ ಹಣ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಧಾವೆ ಹೂಡುವುದು ಸರಿಯಲ್ಲ.

ಡಿಎಸ್ ಎಲ್ಲಿದೆ ಎಂದು ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ. ಅವರಿಗೆ ಜೆಡಿಎಸ್ ಎಲ್ಲಿದೆ ಎಂಬುದನ್ನು ತೋರಿಸುತ್ತೇನೆ, ಈ ಭಾಗದ ಎಲ್ಲರೂ ಈ ಬಾರಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಮತ ನೀಡುವ ಮೂಲಕ ಅಧಿಕ ಮತಗಳ ಹಂತರದಿಂದ ಗೆಲ್ಲಿಸುವ ಕೆಲಸ ಮಾಡಬೇಕು’ ಎಂದು ಮನವಿ ಮಾಡಿದರು.. ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ‘ಈ ಹಿಂದೆ ಫಲವತ್ತಾದ ಜಮೀನಿನಲ್ಲಿ ಬೆಳೆಗಳಿಗೆ ಮಾರಕವಾಗಿ ಬೆಳೆಯುತ್ತಿದ್ದ ಕಾಂಗ್ರೆಸ್ ಗಿಡ ಕಿತ್ತು ಹಾಕುತ್ತಿದ್ದೆವು. ಅದೇ ರೀತಿ ಈ ಬಾರಿಯ ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತು ಹಾಕುವ ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ದಿ ಮರೀಚಿಕೆಯಾಗಿದೆ’ ಎಂದು ಹೇಳಿದರು.



ಸರಿಯಾದ ವಿದ್ಯುತ್ ನೀಡದೆ ಇರುವ ಬೋರ್ವೆಲ್‌ಗಳಿಂದಲೂ ನೀರನ್ನು ಪಡೆಯಲಾಗದಂತಹ ಪರಿಸ್ಥಿತಿಯಲ್ಲಿ ಹಾಸನ ಜಿಲ್ಲೆಯ ರೈತರಲ್ಲಿ ಇದೆ. ಆದುದರಿಂದ ಮುಂದಿನ ದಿನಗಳಲ್ಲಿ ರೈತ ಪರ ಸರ್ಕಾರವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದರು ಮಾಜಿ ಸಚಿವ ಎಚ್.ಡಿ. ರೇವಣ್ಣ, ಶಾಸಕ ಸ್ವರೂಪ್ ಪ್ರಕಾಶ್, ಮಾಜಿ ಶಾಸಕ, ವೈ ಎಸ್.ವಿ.ದತ್ತ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಮೂರ್ತಿ, ಸತ್ಯನಾರಾಯಣ, ಸೀಗೆ ನಂಜುಂಡಪ್ಪ, ಶಿವನಂಜಪ್ಪ, ಶಿವಣ್ಣ , ಕುಮಾರ್ ಇದ್ದರು. ಹಾಸನ ತಾಲೂಕಿನ ಸಾಲಗಾಮೆಯಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯನ್ನು ಎಚ್‌.ಡಿ.ದೇವೇಗೌಡ ಉದ್ಘಾಟಿಸಿದರು.

 

 

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ