LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎರಡು ದಿನ ಸುರಿದ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತ

ಬಳ್ಳಾರಿ: 04:..jನಗರದಲ್ಲಿ ಬುಧವಾರ ಸಂಜೆ ಮತ್ತೆ ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತು. ಸತತ ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ರಸ್ತೆ ಹಾಗೂ ಅಂಡರ್ಪಾಸ್ಗಳಲ್ಲಿ ಮಳೆನೀರು ನಿಂತು ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಯಿತು.
ಮಂಗಳವಾರ ಸಂಜೆ ಬೀಸಿದ ಭಾರೀ ಗಾಳಿ ಹಾಗೂ ಗುಡುಗು ಸಹಿತ ಮಳೆಗೆ ನಗರದ ಹಲವೆಡೆ ಗಿಡ-ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದು ನಾಗರಿಕರು ತತ್ತರಿಸಿದ್ದರು. ಈ ಆತಂಕ ದೂರಾಗುವ ಮುನ್ನವೇ, ಇಂದು ಬುಧವಾರವೂ ಮತ್ತೆ ವರುಣನ ಆರ್ಭಟ ಮುಂದುವರಿಯಿತು.
ಶಾಲೆ-ಕಾಲೇಜುಗಳಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ವ್ಯಾಪಾರಿಗಳು ಮತ್ತು ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ನಗರದ ಪ್ರಮುಖ ರಸ್ತೆಗಳು, ವಿವಿಧ ಅಂಡರ್ಪಾಸ್ಗಳು, ಶಾಲಾ-ಕಾಲೇಜು ಮೈದಾನಗಳು, ಉದ್ಯಾನವನಗಳು ಹಾಗೂ ಸರ್ಕಾರಿ ಕಚೇರಿಗಳ ಪ್ರಾಂಗಣಗಳು ಜಲಾವೃತಗೊಂಡಿದ್ದವು.
ಧಾರಾಕಾರ ಮಳೆಯ ಹೊಡೆತಕ್ಕೆ ರಸ್ತೆಗಳು ಭಾಗಶಃ ಹಾನಿಗೊಳಗಾಗಿದ್ದು, ನಡುರಸ್ತೆಯಲ್ಲೇ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ನಗರದ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು, ಸಾರ್ವಜನಿಕರು ಅನಗತ್ಯ ತೊಂದರೆ ಅನುಭವಿಸುವಂತಾಗಿದೆ.
ವಿದ್ಯುತ್ ಇಲ್ಲದೇ ಜನ ಹೈರಾಣ: ಮಂಗಳವಾರ ಸಂಜೆ ಬೀಸಿದ ಬಿರುಗಾಳಿಗೆ ಬಳ್ಳಾರಿ ನಗರದಲ್ಲಿ ಹತ್ತಾರು ಮರಳು ಮತ್ತು ವಿದ್ಯುತ್ ಕಂಬಗಳು ಉರುಳಿಬಿದ್ದು. ಹೀಗಾಗಿ ವಿದ್ಯುತ್ ತಂತಿ ತುಂಡರಿಸಿ, ಪರಿವರ್ತಕಗಳು ಹಾಳಾಗಿ ನಗರದಲ್ಲಿ ರಾತ್ರಿ ಇಡೀ ವಿದ್ಯುತ್ ವ್ಯತ್ಯಯವಾಯಿತು. ಹೀಗಾಗಿ ಸಾರ್ವಜನಿಕರು ರಾತ್ರಿ ಇಡೀ ಪರಿತಪಿಸುವಂತಾಯಿತು.
ಸಂಡೂರು ಮಳೆ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬುಧವಾರ ಗುಡುಗು, ಸಿಡಿಲು ಸಹಿತ ಕೆಲಕಾಲ ಸಾಧಾರಣ ಮಳೆ ಸುರಿಯಿತು.
ತಾಲ್ಲೂಕಿನ ಜೋಗ, ತಾಳೂರು, ಬನ್ನಿಹಟ್ಟಿ, ತಾರಾನಗರ, ನಾಗಲಾಪುರ, ಲಿಂಗದಹಳ್ಳಿ, ಮುರಾರಿಪುರ ಗ್ರಾಮ ಸೇರಿದಂತೆ ಇತರೆ ಗ್ರಾಮಗಳಲ್ಲಿ ಮಳೆ ಸುರಿಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್