LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಭಾರಿ ಮಳೆ: ಹಂಪಿಯ ಹಲವು ಸ್ಮಾರಕಗಳು ಮುಳುಗಡೆ

ಹೊಸಪೇಟೆ, ಜುಲೈ 31: ಭಾರಿ ಮಳೆಯಾಗುತ್ತಿದ್ದು, ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಡಲಾಗುತ್ತಿದೆ. ಪರಿಣಾಮವಾಗಿ ಐತಿಹಾಸಿಕ ಪ್ರಸಿದ್ಧ ಪ್ರವಾಸಿ ತಾಣ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ಪ್ರವಾಸಿಗರಿಗೆ ವಿಜಯನಗರ ಆಡಳಿತ ಎಚ್ಚರಿಕೆ ನೀಡಿದೆ.

ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಸದ್ಯ ಹಂಪಿಯ ಪುರಂದರ ಮಂಟಪ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಹನುಮ ದೇವಸ್ಥಾನ ಸೇರಿದಂತೆ 12 ಸ್ಮಾರಕಗಳು ಮುಳುಗಡೆಯಾಗಿವೆ.

ಭಾರಿ ಮಳೆಯಾದಾಗ ಅಣೆಕಟ್ಟಿನಿಂದ ನೀರು ಹೊರಬಿಡಲಾಗುತ್ತದೆ. ಸದ್ಯ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಪ್ರವಾಹಕ್ಕೆ ಒಳಗಾದ ಸ್ಥಳಗಳನ್ನು ಪರಿಶೀಲಿಸಿದ್ದೇನೆ ಮತ್ತು ಜನರು ಪ್ರವಾಹಪೀಡಿತ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಡೆಯಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ವಿಜಯನಗರ ಡಿಸಿ ಎಂಎಸ್ ದಿವಾಕರ್ ತಿಳಿಸಿದ್ದಾರೆ.

ಕಳೆದ 4-5 ದಿನಗಳಿಂದ ಜಲಾವೃತಗೊಂಡ ಸ್ಮಾರಕಗಳ ದರ್ಶನಕ್ಕೆ ಪ್ರವಾಸಿಗರಿಗೆ ಅವಕಾಶ ನೀಡಿಲ್ಲ. ಪ್ರವಾಸಿಗರು ಸೂಚನೆಗಳನ್ನು ಪಾಲಿಸದಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್