ಮಂಗಳೂರು, ಸೆಪ್ಟೆಂಬರ್ 9: ಧರ್ಮಸ್ಥಳದ ಬುರುಡೆ ಪ್ರಕರಣ
ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಸ್ಕ್ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದುಕೊಟ್ಟಿದ್ದು ಸೌಜನ್ಯಾಳ ಮಾವ ವಿಠ್ಠಲ ಗೌಡ ಎಂದಿ ಗಿರೀಶ್ ಮಟ್ಟಣ್ಣನವರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದರು. ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಿಂದ ರಾತ್ರಿವೇಳೆ ಈ ತಲೆಬುರುಡೆಯನ್ನು ತರಲಾಗಿತ್ತು ಎಂಬ ಬೆಚ್ಚಿಬೀಳಿಸುವ ಮಾಹಿತಿಯನ್ನು ಎಸ್ಐಟಿ ಮುಂದೆ ಹೇಳಿದ್ದರು. ಆದರೆ ಈಗ ಸೌಜನ್ಯಳ ಮಾವ ವಿಠ್ಠಲ ಗೌಡ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ.
ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣ, ಸುಜಾತ್ ಭಟ್, ಸಮೀರ್ನಿಂದ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಕೆಲವು ದಿನಗಳ ಹಿಂದೆ ದೂರು ನೀಡಿದ್ದರು. ಹೀಗಾಗಿ ಎಸ್ಐಟಿ ಸ್ನೇಹಮಯಿಗೂ ಬುಲಾವ್ ಕೊಟ್ಟು ಸೋಮವಾರ ವಿಚಾರಣೆ ನಡೆಸಿದೆ. ಬಳಿಕ ಮಾತನಾಡಿರುವ ಸ್ನೇಹಿಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಸೌಜನ್ಯಳ ಮೇಲೆ ಅತ್ಯಾಚಾರವೆಸಗಿ ಕೊಂದಿರುವುದು ಬೇರೆ ಯಾರೂ ಅಲ್ಲ, ಆಕೆಯ ಮಾವ ವಿಠ್ಠಲ ಗೌಡ ಎಂದು ಆರೋಪಿಸಿದ್ದಾರೆ.
ಸದ್ಯ ಹೀಗೆ ಆರೋಪಿಸಿರುವ ಸ್ನೇಹಮಯಿ ಕೃಷ್ಣ ತಮ್ಮ ಬಳಿರುವ ಮಾಹಿತಿ, ಸಾಕ್ಷ್ಯ ಸಮೇತ ಎಸ್ಪಿಗೆ ದೂರು ಕೊಡಲು ನಿರ್ಧರಿಸಿದ್ದು, ಸೌಜನ್ಯ ಸಾವಿನ ಪ್ರಕರಣದ ಮರು ತನಿಖೆಯೂ ಆಗಬೇಕು ಎಂದಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.