LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೈಸೂರು ವಿವಿ ರಿಜಿಸ್ಟ್ರಾರ್ ನೇಮಕ ಆದೇಶ ರದ್ದುಪಡಿಸಿದ ಹೈಕೋರ್ಟ್



ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ. ಕೆ.ಎಂ. ಮಹದೇವನ್ ಅವರ ಹುದ್ದೆಗೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಸಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.


ಡಾ. ಕೆ.ಎಂ ಮಹದೇವನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡಸಿದ ನ್ಯಾಯಮೂರ್ತಿ ಬಿ. ಎಂ. ಶ್ಯಾಮಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಬಸಪ್ಪ ಅವರು ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಆಗಿ ನೇಮಕಗೊಳ್ಳಲು ಅರ್ಹತೆಯನ್ನು ಹೊಂದಿಲ್ಲ ಎಂಬುದಾಗಿ ವಿವಿಯ ಕುಲಪತಿ ನೀಡಿರುವ ಅಭಿಪ್ರಾಯವನ್ನು ಪರಿಗಣಿಸಿ ಈ ಆದೇಶ ಮಾಡಿರುವುದಾಗಿ ಪೀಠ ತಿಳಿಸಿದೆ.


ಸರ್ಕಾರದ ಸಾಮಾನ್ಯ ನೌಕರರ ಮಾದರಿಯಲ್ಲಿ ವಿಶ್ವವಿದ್ಯಾಲಯದ ಪದಾಧಿಕಾರಿಗಳನ್ನು ನೇಮಕ ಮಾಡುವುದು ಮತ್ತು ಹುದ್ದೆಯಿಂದ ತೆಗೆದುಹಾಕುವುದಕ್ಕೆ ಅವಕಾಶವಿಲ್ಲ. ವಿಶ್ವವಿದ್ಯಾಲಯದ ಕಾರ್ಯನಿರ್ವಹಣಾಧಿಕಾರಿಗಳನ್ನು ಹಠಾತ್ ಹಾಗೂ ಅನೌಪಚಾರಿಕವಾಗಿ ತೆಗೆದು ಹಾಕಿದಾಗ ನ್ಯಾಯಾಲಯ ಮಧ್ಯಪ್ರವೇಶಕ್ಕೆ ಅವಕಾಶವಿರಲಿದೆ ಎಂದು ಪೀಠ ಹೇಳಿದೆ.







ನೇಮಕಾತಿಯು ಸಾರ್ವಜನಿಕ ಅಥವಾ ಆಡಳಿತಾತ್ಮಕ ಹಿತಾಸಕ್ತಿಗಳನ್ನು ಪೂರೈಸಿಲ್ಲ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೂ ಮುನ್ನ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಸಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್