LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಆ್ಯಪಲ್​ನ ಇಕೋಸಿಸ್ಟಂನಿಂದ  ವಸತಿ ಯೋಜನೆ: ಭಾರತದಲ್ಲೂ ಉದ್ಯೋಗಿಗಳಿಗೆ ಮನೆ

ನವದೆಹಲಿ, ಏಪ್ರಿಲ್ 8: ಭಾರತದಲ್ಲಿ ಆ್ಯಪಲ್​ನ ಇಕೋಸಿಸ್ಟಂನಿಂದ  ವಸತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ ಆ್ಯಪಲ್ ಉತ್ಪನ್ನಗಳನ್ನು ತಯಾರಿಸಲಾಗುವ ಫ್ಯಾಕ್ಟರಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಮನೆಗಳನ್ನು ಕಟ್ಟಿ ಕೊಡಲು  ಯೋಜಿಸಲಾಗಿದೆ.

ಕಳೆದ ಎರಡೂವರೆ ವರ್ಷದಲ್ಲಿ ಆ್ಯಪಲ್​ನಿಂದ ಭಾರತದಲ್ಲಿ ಒಂದೂವರೆ ಲಕ್ಷ ನೇರ ಉದ್ಯೋಗಿಗಳು ಸೃಷ್ಟಿಯಾಗಿವೆ. ಈ ಪೈಕಿ 78,000ಕ್ಕೂ ಹೆಚ್ಚು ಮನೆಗಳನ್ನು ಕಟ್ಟಿಕೊಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಇದರಲ್ಲಿ ತಮಿಳುನಾಡಿನಲ್ಲೇ 58,000 ರೆಸಿಡೆನ್ಷಿಯಲ್ ಯೂನಿಟ್​ಗಳಿರಲಿವೆ ಎಂಬ ಮಾಹಿತಿ ತಿಳಿದುಬಂದಿದೆ. ಆ್ಯಪಲ್ ಸಂಸ್ಥೆ ಚೀನಾ ಮತ್ತು ವಿಯೆಟ್ನಾಂನಲ್ಲೂ ಇದೇ ರೀತಿ ಉದ್ಯೋಗಿಗಳಿಗೆ ವಸತಿ ವ್ಯವಸ್ಥೆಯ ನೀತಿ ಅನುಸರಿಸುತ್ತಿದೆ.

ಭಾರತದಲ್ಲಿ ಆ್ಯಪಲ್ ಕಂಪನಿ ತನ್ನ ಉತ್ಪನ್ನಗಳನ್ನು ನೇರವಾಗಿ ತಯಾರಿಸುವುದಿಲ್ಲ. ಅದಕ್ಕಾಗಿ ಗುತ್ತಿಗೆ ಕಂಪನಿಗಳು, ಸರಬರಾಜುದಾರರಿದ್ದಾರೆ. ಫಾಕ್ಸ್​ಕಾನ್, ಟಾಟಾ, ಪೆಗಾಟ್ರಾನ್ ಕಂಪನಿಗಳು ಐಫೋನ್​ಗಳನ್ನು ಆ್ಯಪಲ್​ಗಾಗಿ ತಯಾರಿಸಿಕೊಡುವ ಗುತ್ತಿಗೆ ಪಡೆದಿವೆ. ಫಿನ್​ಲ್ಯಾಂಡ್ ಮೂಲದ ಸಾಲ್​ಕಾಂಪ್ ಎಂಬ ಕಂಪನಿ ಐಫೋನ್​ನ ಚಾರ್ಜರ್ ಅನ್ನು ಭಾರತದಲ್ಲಿ ತಯಾರಿಸುತ್ತದೆ. ಬೇರೆ ಬೇರೆ ಬಿಡಿಭಾಗಗಳನ್ನು ತಯಾರಿಸಿಕೊಡುವ ಕಂಪನಿಗಳೂ ಇವೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ವಸತಿ ಭಾಗ್ಯ ಸಿಗಲಿದೆ.

ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮನೆಗಳ ನಿರ್ಮಾಣವಾಗಲಿದೆ. ತಮಿಳುನಾಡಿನಲ್ಲಿ ಕಟ್ಟಲಾಗುವ 58,000 ಮನೆಗಳ ನಿರ್ಮಾಣ ಜವಾಬ್ದಾರಿಯನ್ನು ಸಿಪ್​ಕಾಟ್ ಸಂಸ್ಥೆ ವಹಿಸಿಕೊಂಡಿದೆ. ರಿಯಲ್ ಎಸ್ಟೇಟ್ ಕಂಪನಿ ಎಸ್​ಪಿಆರ್ ಇಂಡಿಯಾ ಮತ್ತು ಟಾಟಾ ಗ್ರೂಪ್ ಈ ಆ್ಯಪಲ್ ಮನೆಗಳ ನಿರ್ಮಾಣದಲ್ಲಿ ಕೈಜೋಡಿಸಲಿವೆ. ಇದಕ್ಕೆ ಬೇಕಾಗುವ ಫಂಡಿಂಗ್ ಅನ್ನು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಉದ್ಯಮಿಗಳು ಭರಿಸಲಿದ್ದಾರೆ. ವರದಿ ಪ್ರಕಾರ ಶೇ. 10-15ರಷ್ಟು ಫಂಡಿಂಗ್ ಕೇಂದ್ರದಿಂದ ಬರಲಿದೆ.

ಈ ಹಣಕಾಸು ವರ್ಷ ಮುಗಿಯುವುದರೊಳಗೆ, ಅಂದರೆ 2025ರ ಮಾರ್ಚ್ 31ರೊಳಗೆ ಸಿಪ್ಕಾಟ್ ಈ ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸುವ ಸಾಧ್ಯತೆ ಇದೆ. ‘ಉದ್ಯೋಗಿಗಳಿಗೆ ವಸತಿ ನಿರ್ಮಿಸಿಕೊಡುವ ಯೋಜನೆಯು ವಲಸಿಗ ಉದ್ಯೋಗಿಗಳಿಗೆ, ಅದರಲ್ಲೂ ಮಹಿಳಾ ಉದ್ಯೋಗಿಗಳಿಗೆ ಭದ್ರತೆಯಾಗಿರುತ್ತದೆ,’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಕನಾಮಿ ಟೈಮ್ಸ್ ವರದಿ ಮಾಡಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ