LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

'ದಾವಣಗೆರೆ ಬಿಜೆಪಿ ಬಂಡಾಯ ಶಮನ'ರಾಜಾಹುಲಿ ಸಂಧಾನ ಹೇಗೆ ಸಕ್ಸಸ್ ಆಯ್ತು?

ದಾವಣಗೆರೆ, ಮಾರ್ಚ್‌, 26: ದಾವಣಗೆರೆ ಬಿಜೆಪಿಯಲ್ಲಿ ಎದ್ದಿದ್ದ ಬಂಡಾಯ ಶಮನಗೊಳಿಸುವಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದು, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ನೇತೃತ್ವದಲ್ಲಿ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ.


ಅಪೂರ್ವ ರೆಸಾರ್ಟ್‌ನಲ್ಲಿ ನಡೆದ ಗಂಟೆಗಟ್ಟಲೇ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಹಾಗೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಬಣದ ನಡುವೆ ನಡೆಸಿದ ಸಂಧಾನ ಯಶಸ್ವಿಯಾಗಿದೆ. ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಹಠ ತೊಟ್ಟಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಭಿನ್ನಮತೀಯರ ಜೊತೆ ಮಾತುಕತೆ ನಡೆಸಿದರು.

ಅಪೂರ್ವ ರೆಸಾರ್ಟ್‌ಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರು ಸಂಸದ ಸಿದ್ದೇಶ್ವರರ ಬಣ ಹೊರಗಿಟ್ಟು ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ಮುಖಂಡರು ಮುಕ್ತವಾಗಿ ಚರ್ಚಿಸಿದರು. ರವೀಂದ್ರನಾಥ್, ರೇಣುಕಾಚಾರ್ಯ, ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್, ಮಾಡಾಳ್ ಮಲ್ಲಿಕಾರ್ಜುನ, ಡಾ.ರವಿಕುಮಾರ್, ಬಸವರಾಜ್ ನಾಯ್ಕ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು. ಅಲ್ಲದೆ, ಯಡಿಯೂರಪ್ಪ ಅವರು ಹೈಕಮಾಂಡ್ ಈ ಬಾರಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಿದೆ. ಎಲ್ಲರೂ ಗೆಲುವಿಗೆ ಶ್ರಮಿಸಿ ಎಂದು ಸಲಹೆ ನೀಡಿದರು.

ಸಭೆಯ ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ರೇಣುಕಾಚಾರ್ಯ ಪಟ್ಟು ಹಿಡಿದರು. ರವೀಂದ್ರನಾಥ್ ಸೇರಿದಂತೆ ಹಲವರು ಬೆಂಬಲ ಸೂಚಿಸಿದರು. ಆ ಬಳಿಕ ಯಡಿಯೂರಪ್ಪ ಅವರು, ದಾವಣಗೆರೆ ಮಧ್ಯಕರ್ನಾಟಕದ ಹೆಬ್ಬಾಗಿಲು. ದಾವಣಗೆರೆ ಜಿಲ್ಲೆಯಾದಾಗಿನಿಂದ ಬಿಜೆಪಿ ಸೋತಿಲ್ಲ. ಈ ಬಾರಿಯೂ ಸೋಲಬಾರದು. ಎಲ್ಲರೂ ಒಟ್ಟಾಗಿ ಗಾಯತ್ರಿ ಸಿದ್ದೇಶ್ವರ ಗೆಲುವಿಗೆ ಪ್ರಯತ್ನಿಸಬೇಕು. ಮತ್ತೆ ಬಿಜೆಪಿ ಭದ್ರಕೋಟೆ ಎಂಬುದು ಸಾಬೀತಾಗಬೇಕು. ಈ ಮೂಲಕ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಲು ನಾವೆಲ್ಲರೂ ಶ್ರಮಿಸೋಣ ಎಂದು ಹೇಳಿದರು.

ಅಪಸ್ವರ ಎತ್ತಿರುವವರ ಸ್ವರ ಸರಿಪಡಿಸಿದ ಯಡಿಯೂರಪ್ಪ ಅವರು, ತಾರಕಕ್ಕೇರಿದ ದಾವಣಗೆರೆ ಬಿಜೆಪಿ ಭಿನ್ನಮತ ಬಿಕ್ಕಟ್ಟು ಶಮನಗೊಳಿಸುವಲ್ಲಿ ಗಂಟೆಗಟ್ಟಲೇ ನಡೆಸಿದ ಸಭೆಯು ಯಶಸ್ವಿಯಾಗಿದೆ. ಸಮರವೋ, ಸಂಧಾನವೋ ಎಂಬ ಕುತೂಹಲ ಮೂಡಿತ್ತಾದರೂ, ಅಂತಿಮವಾಗಿ ಶಾಂತಿಯುತವಾಗಿ ಎಲ್ಲವೂ ಪರಿಹಾರಗೊಂಡಿದೆ.

ಭಿನ್ನರ ಜೊತೆ ಸಭೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ಬಿಜೆಪಿಯಲ್ಲಿ ನವಚೈತನ್ಯ ಮೂಡಿದೆ. ಯಡಿಯೂರಪ್ಪ ಅವರು ಆಗಮಿಸಿ ಸಮಸ್ಯೆ ಪರಿಹರಿಸಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಸಂತಸ ತಂದಿದೆ. ಭಿನ್ನಮತದಿಂದ ಗೊಂದಲದಲ್ಲಿದ್ದವರು ಈಗ ಖುಷಿ ಆಗಿದ್ದಾರೆ.

ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಜಿ.ಕರುಣಾಕರ ರೆಡ್ಡಿ, ಎಂ.ಬಸವರಾಜ್ ನಾಯ್ಕ್, ಮಾಜಿ ಎಂಎಲ್‌ಸಿ ಶಿವಯೋಗಿಸ್ವಾಮಿ, ಯುವ ನಾಯಕರಾದ ಮಾಡಾಳ್ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ್, ಡಾ.ಟಿ.ಜಿ.ರವಿಕುಮಾರ್, ಸೋಮೇಶ್ವರ ಸುರೇಶ್, ಎಲ್.ಎನ್.ಕಲ್ಲಪ್ಪ ಎಲ್ಲರೊಂದಿಗೆ ಮಾತನಾಡಿ ಯಡಿಯೂರಪ್ಪ ಸಮಸ್ಯೆ ಪರಿಹರಿಸಿದ್ದಾರೆ.

ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಲು ನಾವು ಪಣ ತೊಟ್ಟಿದ್ದೇವೆ. ಆದರೆ, ದಾವಣಗೆರೆ ಬಿಜೆಪಿಯನ್ನು‌ ಜಿ.ಎಂ.ಸಿದ್ದೇಶ್ವರ ಕುಟುಂಬದ ಹಿಡಿತದಿಂದ ಬಿಡಿಸಿಯೇ ಸಿದ್ಧ ಎಂದು ಬಿಜೆಪಿ ಬಂಡಾಯ ನಾಯಕರು ಹೇಳುತ್ತಿದ್ದಾರೆ. ನಾವು ಯಾರ ವಿರುದ್ಧವೂ ರಣಕಹಳೆ ಮೊಳಗಿಸಿಲ್ಲ. ಮತದಾರರು, ಜನರು, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ತಿಳಿಸಿದ್ದೇವೆ ಎಂದು ಹೇಳುತ್ತಲೇ ಇದ್ದ ಎಸ್.ಎ.ರವೀಂದ್ರನಾಥ್ ನೇತೃತ್ವದ ತಂಡವು ಮತ್ತೆ ಮೋದಿ ಪ್ರಧಾನಿ ಆಗಬೇಕೆಂಬುದು ನಮ್ಮೆಲ್ಲರ ಆಶಯ. ಇದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುತ್ತೇವೆ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ