LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸುರಕ್ಷತಾ ಕಾಮಗಾರಿ ಕಾರಣ ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲುಗಳು 2 ದಿನ ರದ್ದು

ಹುಬ್ಬಳ್ಳಿ, ಏಪ್ರಿಲ್​ 03: ನೈಋತ್ಯ ರೈಲ್ವೆ ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣ ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ . ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದುಗಳಿಸಲಾಗಿದೆ. ವಂದೇ ಭಾರತ ರೈಲಿನ ಸಮಯವನ್ನು ಪರಿಷ್ಕರಿಸಲಾಗಿದೆ. ಹಾಗಿದ್ದರೆ ಯಾವ ಯಾವ ರೈಲುಗಳು ರದ್ದಾಗಿವೆ.

ರೈಲು ಸಂಖ್ಯೆ 07339/07340 ಶ್ರೀ ಸಿದ್ಧಾರೂಢ ಸ್ವಾಮಿ (SSS) ಹುಬ್ಬಳ್ಳಿ – ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಬೆಂಗಳೂರು ಮಧ್ಯೆ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ ವಿಶೇಷ ರೈಲು ಏಪ್ರಿಲ್​ 6 ಮತ್ತು 7 ರಂದು ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 06255 ಕೆಎಸ್​ಆರ್​ ಬೆಂಗಳೂರು-ಮೈಸೂರು ಮೆಮು ವಿಶೇಷ ಮತ್ತು ರೈಲು ಸಂಖ್ಯೆ 06650 ಮೈಸೂರು KSR ಬೆಂಗಳೂರು ಮೆಮು ವಿಶೇಷ ರೈಲು ಏಪ್ರಿಲ್ 7 ಮತ್ತು 8 ರಂದು ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರಿನ ಯಶವಂತಪುರ ನಡುವೆ ಸಂಚರಿಸುವ ರೈಲು ಏಪ್ರಿಲ್​ 7, 8 ಮತ್ತು 9 ರಂದು ಭಾಗಶಃ ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 06243 ಬೆಂಗಳೂರು ಹೊಸಪೇಟೆ ಮತ್ತು ರೈಲು ಸಂಖ್ಯೆ 06244 ಹೊಸಪೇಟೆ- ಬೆಂಗಳೂರು ರೈಲು ಏಪ್ರಿಲ್ 7, 8 ಮತ್ತು 9 ರಂದು ಭಾಗಶಃ ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 16512 ಕೆಎಸ್​​ಆರ್​ ಬೆಂಗಳೂರು-ಕಣ್ಣೂರು ರೈಲು ಏಪ್ರಿಲ್​ 7 ಮತ್ತು 8 ರಂದು ಕೆಎಸ್​ಆರ್​ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 20661 ಕೆಎಸ್​ಆರ್​ ಬೆಂಗಳೂರು ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಏಪ್ರಿಲ್​ 8 ರಂದು ಕೆಎಸ್​ಆರ್​ ಬೆಂಗಳೂರಿನಿಂದ 30 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

ರೈಲು ಸಂಖ್ಯೆ 16591 ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಮೈಸೂರು ಹಂಪಿ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 8 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ 90 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

ರೈಲು ಸಂಖ್ಯೆ 12079 ಕೆಎಸ್‌ಆರ್ ಬೆಂಗಳೂರು ನಿಂದ ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ ಅನ್ನು ಏಪ್ರಿಲ್ 8 ಮತ್ತು 9 ರಂದು ಕ್ರಮವಾಗಿ ಕೆಎಸ್‌ಆರ್ ಬೆಂಗಳೂರಿನಿಂದ 30 ನಿಮಿಷ ಮತ್ತು 75 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ