LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ಮರು ತನಿಖೆಗೆ ಹೈದರಾಬಾದ್​ ಪೊಲೀಸರ ನಿರ್ಧಾರ

ಹೈದರಾಬಾದ್: ಎಚ್‌ಸಿಯು ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಕುರಿತಂತೆ ಪೊಲೀಸ್ ಇಲಾಖೆ ಮರು ತನಿಖೆ ನಡೆಸಲು ನಿರ್ಧರಿಸಿದೆ.


ಇತ್ತೀಚೆಗಷ್ಟೇ ಪೊಲೀಸರು ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದು, ಈ ವಿಚಾರದಲ್ಲಿ ವಿವಿ ವಿಸಿ ಹಾಗೂ ಹಲವು ಮುಖಂಡರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ರೋಹಿತ್ ಅವರ ತಾಯಿ, ವಿದ್ಯಾರ್ಥಿಗಳು ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಪ್ರಕರಣವನ್ನು ಮರು ತನಿಖೆ ಮಾಡಲು ಈ ನಿರ್ಧಾರ ಕೈಗೊಂಡಿದೆ.


ವೇಮುಲಾ ರೋಹಿತ್ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದರು. ಈ ಘಟನೆಯ ಬಗ್ಗೆ ವಿದ್ಯಾರ್ಥಿ ಸಂಘಗಳು ಮತ್ತು ಹೆಚ್​ಸಿಯು ವಿದ್ಯಾರ್ಥಿಗಳು ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಕೈಗೊಂಡಿದ್ದರು. ದೇಶಾದ್ಯಂತ ಹಲವು ರಾಜಕೀಯ ಪಕ್ಷಗಳು ಪ್ರತಿಕ್ರಿಯಿಸಿದ್ದವು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಬಾರಿ ಹೈದರಾಬಾದ್‌ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಸೈಬರಾಬಾದ್‌ನ ಗಚಿಬೌಲಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನವೆಂಬರ್ 2023 ರಲ್ಲಿ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದರು.


ತನಿಖಾಧಿಕಾರಿ ಈ ವರ್ಷ ಮಾರ್ಚ್ 21 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಇತ್ತೀಚೆಗೆ ಮತ್ತೆ ಎಲ್ಲರಲ್ಲೂ ಆತಂಕ ಶುರುವಾಗಿದೆ. ಡಿಜಿಪಿ ರವಿಗುಪ್ತ ಶುಕ್ರವಾರ ಈ ಪ್ರಕರಣದ ಮರು ತನಿಖೆಗೆ ನಿರ್ಧರಿಸಿದ್ದಾರೆ. ಇದಕ್ಕೆ ಅನುಮತಿ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲಿದ್ದಾರೆ. ರೋಹಿತ್ ಆತ್ಮಹತ್ಯೆ ಪ್ರಕರಣದ ಮರು ತನಿಖೆ ಮುಂದುವರಿಯಲಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್