LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಡಿಸಿಎಂ ಆಗಿ ಮುಂದುವರಿಯಲು ನನಗೆ ತೃಪ್ತಿ : ಡಿ.ಕೆ.ಶಿ.

ನವದೆಹಲಿ ಡಿ., ೨೪- ಸಿಎಂ ಬದಲಾವಣೆ ವದಂತಿಯನ್ನು ತಳ್ಳಿ ಹಾಕಿರುವ ಡಿ.ಕೆ.ಶಿವಕುಮಾರ, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಡಿ.ಕೆ.ಶಿವಕುಮಾರ ಮಾರ್ಮಿಕವಾಗಿ ನುಡಿಯುವ ಮೂಲಕ  ಅಚ್ಚರಿ ಮೂಡಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಅಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ್ದು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಊಹಾಪೋಹಗಳು ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹೈಕಮಾಂಡ್ ಜೊತೆ ಸಭೆಯ ಬಗ್ಗೆಯೂ ಹೇಳಿಕೆ ನೀಡಿರುವ ಅವರು, ತಾವು ಯಾರನ್ನೂ ಭೇಟಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ. 1990ರ ದಶಕದಿಂದಲೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ನೆನಪಿಸಿಕೊಂಡ ಅವರು ಪಕ್ಷದ ಕಾರ್ಯಕರ್ತನಾಗಿರಲು ಇಷ್ಟ ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಭಾವ್ಯ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತೆರೆ ಎಳೆದರು.

ಎರಡೂವರೆ ವರ್ಷದ ಫಾರ್ಮುಲಾ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, "ಇದನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಲಾಗದು" ಎಂದು ಡಿಕೆಶಿ ಹೇಳಿದ್ದಾರೆ. ಪೂರ್ಣ ಐದು ವರ್ಷ ನನಗೆ ಉಪಮುಖ್ಯಮಂತ್ರಿಯಾಗಿ ಮುಂದುವರೆಯಲು ಸಂತೋಷವಿದೆ ಎಂದು ಪುನರುಚ್ಚರಿಸಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಮಧ್ಯೆ ಪ್ರಿಯಾಂಕಾ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂಬ ಊಹಾಪೋಹ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, "ಪ್ರಿಯಾಂಕಾ ಗಾಂಧಿ ಅವರ ಏಕೈಕ ಧ್ಯೇಯ ರಾಹುಲ್ ಗಾಂಧಿಯವರನ್ನು ಪ್ರಧಾನಿಯಾಗಿ ಮಾಡುವುದು" ಎಂದು ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ಮಾಡಿದರೂ ಅದನ್ನು ಸ್ವೀಕರಿಸುತ್ತೇನೆ. ನನ್ನ ನಾಯಕಿ ಎಐಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್