LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜಗನ್ ಮೋಹನ್ ರೆಡ್ಡಿ ಅವರನ್ನು ನಾನು ಭೇಟಿ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್



ಬೆಂಗಳೂರು: ಆಂಧ್ರಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ನಾನು ಭೇಟಿ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಳೆದ 10 ದಿನಗಳಿಂದ ಜಗನ್ ಮೋಹನ್ ರೆಡ್ಡಿ ಅವರು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇತ್ತ ಕೆಲ ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಡಿಸಿಎಂ ಡಿಕೆಶಿ ಹಾಗೂ ಜಗನ್ ಮೋಹನ್ ರೆಡ್ಡಿ ಪರಸ್ಪರ ಹೂಗುಚ್ಛ ನೀಡಿ ಭೇಟಿಯಾಗಿರುವ ಫೋಟೊ ಹರಿದಾಡುತ್ತಿದೆ.


ಈ ಸಂಬಂಧ ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟೀಕರಣ ನೀಡಿರುವ ಡಿ.ಕೆ.ಶಿವಕುಮಾರ್, ನಾನು ಆಂಧ್ರ ಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿರುವಂತೆ ಯಾರೋ ಕಿಡಿಗೇಡಿಗಳು ನಕಲಿ ಫೋಟೊ ಸೃಷ್ಟಿಸಿ ಹರಡುತ್ತಿದ್ದಾರೆ. ನಾನು ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿಲ್ಲ. ಯಾರೂ ಕೂಡ ಇದನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.







ಆಂಧ್ರಪ್ರದೇಶದ ಬಿಜೆಪಿ ಶಾಸಕರೊಬ್ಬರು ಇತ್ತೀಚೆಗೆ ಜಗನ್ ಮೋಹನ್ ರೆಡ್ಡಿ ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಡಿಕೆಶಿ ಮತ್ತು ಜಗನ್ ಮೋಹನ್ ಬೆಂಗಳೂರಲ್ಲಿ ಭೇಟಿಯಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇದೀಗ ಆ ಊಹಾಪೋಹಗಳಿಗೆ ಡಿಸಿಎಂ ಡಿಕೆಶಿ ತೆರೆ ಎಳೆದಿದ್ದು, ನಾನು ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿಲ್ಲ. ಯಾರೂ ಕೂಡ ಇದನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ