LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದಾವಣಗೆರೆಯಲ್ಲಿ ಐ ಲವ್‌ ಮೊಹಮ್ಮದ್‌ ಫ್ಲೆಕ್ಸ್‌ ಗಲಾಟೆ; 8 ಜನರ ಬಂಧನ

ದಾವಣಗೆರೆ, ಸೆಪ್ಟೆಂಬರ್​​ 27: ಕಾರ್ಲ್​ ಮಾರ್ಕ್ಸ್​ ನಗರದಲ್ಲಿ ‘ಐ ಲವ್ ಮೊಹಮ್ಮದ್ಎಂಬ ಬರಹವುಳ್ಳ ಫ್ಲೆಕ್ಸ್ ವಿಚಾರವಾಗಿ ಸೆ. 24ರ ರಾತ್ರಿ ನಡೆದಿದ್ದ ಕಲ್ಲು ತೂರಾಟ ಘಟನೆ ಸಂಬಂಧ ಈವರೆಗೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಜಾದನಗರ ಠಾಣಾ ವ್ಯಾಪ್ತಿಯಲ್ಲಿ 2 ಕೋಮಿನವರಿಂದ ಪ್ರತ್ಯೇಕ ದೂರು ಆಧರಿಸಿ ಬಂಧನ ನಡೆದಿದೆ. ಕಾರ್ಲ್​ ಮಾರ್ಕ್ಸ್​ ನಗರದ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸುವ ಹಾಗೂ ಅನಗತ್ಯ ಮಾಹಿತಿ ಹಂಚಿಕೊಳ್ಳುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಖಡಕ್​ ಎಚ್ಚರಿಕೆಯನ್ನೂ ದಾವಣಗೆರೆ ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೀಡಿದ್ದಾರೆ.

ಕಾರ್ಲ್​ ಮಾರ್ಕ್ಸ್​ ನಗರದಲ್ಲಿ ಹಾಕಲಾಗಿದ್ದ ‘ಐ ಲವ್ ಮೊಹಮ್ಮದ್  ಎಂಬ ಬರಹವುಳ್ಳ ಫ್ಲೆಕ್ಸ್ ಹರಿಯಲಾಗಿದೆ ಎಂಬ ಸುದ್ದಿ ಹರಿದಾಡಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಸುದ್ದಿ ಕೇಳಿ ಗುಂಪು ಗುಂಪಾಗಿ ಜನರು ಸೇರಿದ್ದು, ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಗಲಾಟೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ವಾಹನಗಳು ಜಖಂಗೊಂಡಿದ್ದವು. ಘಟನೆ ಸಂಬಂಧ ಎರಡೂ ಕೋಮಿನ 107 ಜನರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿತ್ತು. ಘಟನೆ ಬಳಿಕ ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಿದ್ದ ಪೊಲೀಸರು, ಯಾವುದೇ ಅಹಿತಕರ ಸುದ್ದಿ ಹರಡದಂತೆ ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದರು. ಆ ಬಳಿಕ ಘಟನಾ ಸ್ಥಳದಲ್ಲಿ ಪರಿಸ್ಥಿತಿ ಶಾಂತಗೊಂಡಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್