LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾಂಗ್ರೆಸ್ ಗದ್ದುಗೆ ಏರಿದರೆ ಪಿತ್ರಾರ್ಜಿತ ಆಸ್ತಿಗೂ ತೆರಿಗೆ ನಿಶ್ಚಿತ: ಮೋದಿ ವಾಗ್ದಾಳಿ

ಅಂಬಿಕಾಪುರ,24: ಕಾಂಗ್ರೆಸ್‌ನ ಅಪಾಯಕಾರಿ ಉದ್ದೇಶಗಳು ಒಂದರ ನಂತರ ಒಂದರಂತೆ ಬೆಳಕಿಗೆ ಬರುತ್ತಿವೆ. ಈಗ ಕಷ್ಟಪಟ್ಟು ಸಂಪಾದಿಸುವ ನಿಮ್ಮ ಮಕ್ಕಳ ಮೇಲೂ ಪಿತ್ರಾರ್ಜಿತ ತೆರಿಗೆ ಹೇರುವುದಾಗಿ ಆ ಪಕ್ಷ ಹೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಮಾ ಮಹಾಮಾಯಿ ಕಿ ಜೈ ಘೋಷಣೆಯೊಂದಿಗೆ ಇಂದು ಪ್ರಧಾನಿ ಮೋದಿ ಛತ್ತೀಸ್‌ಗಢದ ಸರ್ಗುಜಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು.

ಭಾರತ ಸ್ವಾವಲಂಬಿಯಾದರೆ ಕೆಲವು ಶಕ್ತಿಗಳ ಆಟಗಳು ಬಂದ್​ ಆಗುತ್ತವೆ. ಬಿಜೆಪಿ ಭಯೋತ್ಪಾದನೆ ಮತ್ತು ನಕ್ಸಲ್ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹಿಂಸಾಚಾರ ಹರಡುವವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಪು ಇದೆ. ಸಂವಿಧಾನ ರಚನೆಯಾಗುತ್ತಿರುವಾಗ ದೇಶದ ಪ್ರಜ್ಞಾವಂತರು ಒಟ್ಟಾಗಿ ಸೇರಿ ಭಾರತದಲ್ಲಿ ಧರ್ಮ ಆಧಾರದ ಮೇಲೆ ಮೀಸಲಾತಿ ಬೇಡ. ದಲಿತರು, ಗಿರಿಜನರ ಹೆಸರಲ್ಲಿ ಮೀಸಲಾತಿ ನೀಡುವುದಾಗಿ ತೀರ್ಮಾನಿಸಿದ್ದರು. ಆದರೆ ವೋಟ್ ಬ್ಯಾಂಕ್ ಹಸಿವಿನ ಕಾಂಗ್ರೆಸ್ ಇದಕ್ಕೆ ಕ್ಯಾರೇ ಎನ್ನಲಿಲ್ಲ. ಸಂವಿಧಾನ, ಬಾಬಾ ಸಾಹೇಬರ ಮಾತುಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ವರ್ಷಗಳ ಹಿಂದೆಯೇ ಆಂಧ್ರಪ್ರದೇಶದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕಾಂಗ್ರೆಸ್ ಯೋಜಿಸಿತ್ತು ಎಂದು ಆರೋಪಿಸಿದರು.

2009ರ ಪ್ರಣಾಳಿಕೆಯಲ್ಲಿ ಧರ್ಮದ ಹೆಸರಿನಲ್ಲಿ ಮೀಸಲಾತಿ ನೀಡುವುದಾಗಿ ಕಾಂಗ್ರೆಸ್‌ ಸ್ಪಷ್ಟವಾಗಿ ಹೇಳಿತ್ತು. ಕರ್ನಾಟಕದಲ್ಲಿಯೂ ಕಾಂಗ್ರೆಸ್‌ ಧರ್ಮದ ಹೆಸರಿನಲ್ಲಿ ಮೀಸಲಾತಿ ಜಾರಿಗೆ ತಂದಿತ್ತು. ಬಿಜೆಪಿ ಸರಕಾರ ಬಂದಾಗ ಕಾಂಗ್ರೆಸ್‌ ನಿರ್ಧಾರವನ್ನು ಬುಡಮೇಲು ಮಾಡಿತು ಎಂದು ತಿಳಿಸಿದರು.

ಕಾಂಗ್ರೆಸ್ ಎಲ್ಲಾ ಮುಸ್ಲಿಂ ಜಾತಿಗಳನ್ನು ಒಬಿಸಿ ಕೋಟಾದಲ್ಲಿ ಇರಿಸಿದೆ. ಈ ಮೂಲಕ ಸಾಮಾಜಿಕ ನ್ಯಾಯವನ್ನು ಅವಮಾನಿಸಿದೆ. ಇಡೀ ದೇಶದಲ್ಲಿ ಕರ್ನಾಟಕದ ಮಾದರಿಯನ್ನು ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ ಎಂದರು.

ಜೂನ್ 4ರ ನಂತರ ಛತ್ತೀಸ್‌ಗಢದ ಪ್ರತಿ ಕುಟುಂಬದ ವೃದ್ಧ ಪೋಷಕರಿಗೆ ಉಚಿತ ಚಿಕಿತ್ಸೆ ಸಿಗಲಿದೆ. ಸರ್ಗುಜದ 1 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಕಿಸಾನ್ ನಿಧಿಯ 200 ಕೋಟಿ ರೂಪಾಯಿ ಜಮಾ ಮಾಡಲಾಗಿದೆ. ಮುಂಬರುವ 5 ವರ್ಷಗಳಲ್ಲಿ ಬಹಳಷ್ಟು ಮಾಡಬೇಕಾಗಿದೆ. ಸರ್ಗುಜ ಅಂದರೆ 'ಸ್ವರ್ಗದ ಮಗಳು' ಎಂದರ್ಥ. ಈ ಪ್ರದೇಶವನ್ನು ಅಭಿವೃದ್ಧಿ ಮಾಡಬೇಕಿದೆ. ಆದ್ದರಿಂದ ಕಮಲ ಪ್ರತಿಯೊಂದರಲ್ಲೂ ಅರಳಬೇಕು. ನಿಮ್ಮ ಸೇವಕನಿಗೆ ಆಶೀರ್ವಾದ ಮಾಡಿ ಎಂದು ಮೋದಿ ಮನವಿ ಮಾಡಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ