LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾನೂನು ಬಾಹಿರವಾಗಿ ಮರಗಳ ಕಟಾವು : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ 

ಬಳ್ಳಾರಿ, ಮೇ 13.: ಬಳ್ಳಾರಿ ನಗರದಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಕಾನೂನುಬಾಹಿರವಾಗಿ ಮರಗಳನ್ನು ಕಡಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸಿದ್ದೇಶ್ ಉಳೂರು ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳ ವೇಳೆ ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಸುಮಾರು 25ಕ್ಕೂ ಹೆಚ್ಚು ಮರಗಳನ್ನು ಅನಧಿಕೃತವಾಗಿ ಕಡಿದು ಹಾಕಲಾಗಿದೆ ಎಂದು ಅವರು ಆರೋಪಿಸಿದರು. ಈ ಕುರಿತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆಗೆ ಸ್ಪಷ್ಟೀಕರಣ ಕೇಳಿ ಪತ್ರ ಬರೆದಿದ್ದರೂ ಇದುವರೆಗೆ ಯಾವುದೇ ಸಮರ್ಪಕ ಉತ್ತರ ಅಥವಾ ಧೃಢೀಕೃತ ನಕ್ಷೆ ನೀಡಿಲ್ಲ ಎಂದು ದೂರಿದರು.
ಬಳ್ಳಾರಿ ಈಗಾಗಲೇ ತೀವ್ರ ಬಿಸಿಲಿನಿಂದ ಬಳಲುತ್ತಿದ್ದು, ಇಂತಹ ಸಂದರ್ಭದಲ್ಲಿ ಮರಗಳ ಕಡಿತದಿಂದ ಸಾರ್ವಜನಿಕರಿಗೆ ನೆರಳು ಹಾಗೂ ಶುದ್ಧ ಗಾಳಿ ಸಿಗದಂತಾಗಿದೆ. ಪಕ್ಷಿಗಳ ಆಶ್ರಯವೂ ಹಾನಿಗೊಳಗಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಂಡು ಉಳಿದಿರುವ ಮರಗಳನ್ನು ಸಂರಕ್ಷಿಸಬೇಕು. ಈಗಾಗಲೇ ಕಡಿದಿರುವ ಪ್ರತಿಯೊಂದು ಮರಕ್ಕೆ ಪರ್ಯಾಯವಾಗಿ 10 ಗಿಡಗಳನ್ನು ನೆಟ್ಟು ನಗರ ಹಸಿರೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದಲ್ಲದೆ, ಕರ್ನಾಟಕ ಅರಣ್ಯ ಅಧಿನಿಯಮ 1969 ಹಾಗೂ ಎನ್‌ಜಿಟಿ (National Green Tribunal Act-2010) ನಿಯಮಗಳ ಪ್ರಕಾರ ಕ್ರಮ ಕೈಗೊಂಡು ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ ಗುತ್ತಿಗೆದಾರರನ್ನು ಸರ್ಕಾರಿ ಟೆಂಡರ್‌ಗಳಿಂದ ನಿಷೇಧಿಸಿ ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿಗಳಿಗೆ, ಲೋಕೋಪಯೋಗಿ ಸಚಿವ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಪತ್ರ ನೀಡಿ ಸಿದ್ದೇಶ್ ಉಳೂರು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್