LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗಣರಾಜ್ಯೋತ್ಸವ ಹಿನ್ನೆಲೆ ಬೆಂಗಳೂರು ಪೊಲೀಸ್​ ಭದ್ರತೆ, ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಬೆಂಗಳೂರು, ಜನವರಿ 24: ಜನವರಿ 26 ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manik Shah Parade Ground) ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ ದಯಾನಂದ್ ಮಾತನಾಡಿ, ಈ ಭಾರಿ ಗಣರಾಜ್ಯೋತ್ಸವಕ್ಕೆ ಸಕಲ ತಯಾರಿಯಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.


ಪೊಲೀಸ್​ ಭದ್ರತೆ
8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರುತ್ತಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಪ್ರವೇಶ ದ್ವಾರಗಳ ವಿವರ
ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ