LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಶ್ರೀನಗರದಲ್ಲಿ ಬೆಳಗಿನ ಜಾವ ಭಾರೀ ಸ್ಫೋಟ; ಕ್ಷಿಪಣಿ ಬಿದ್ದ ಅನುಭವ

ಶ್ರೀನಗರ: ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಪೂರ್ಣವಾಗಿ ಯುದ್ಧದ ವಾತಾವರಣ ಏರ್ಪಟ್ಟಿದೆ. ಪಾಕಿಸ್ತಾನದ LOC ಬಳಿ ನಿರಂತವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಇದೀಗ ಡ್ರೋನ್‌ ಮೂಲಕ ದಾಳಿ ನಡೆಸುತ್ತಿದ್ದು, ಪಂಜಾಬ್‌, ರಾಜಸ್ಥಾನ ಹಾಗೂ ಗುಜರಾತಿನ ಭಾಗದಲ್ಲಿ ಡ್ರೋನ್‌ಗಳ ದಾಳಿ ಆಗಿದೆ. ಆದರೆ ಭಾರತದ S-400 (ಸುದರ್ಶನ ) ಅವುಗಳನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದೆ.



ಇಂದು ಬೆಳಗ್ಗೆ ಅಮೃತ ಸರದ ಬಳಿ ಡ್ರೋನ್‌ ಹಾಗೂ ಕ್ಷಿಪಣಿಗಳ ಅವಶೇಷಗಳು ಪತ್ತೆಯಾಗಿವೆ. ಶ್ರೀನಗರದ ಪ್ರಮುಖ ಪ್ರವಾಸಿ ಆಕರ್ಷಣೆಯಾದ ದಾಲ್ ಸರೋವರದ ಆಳಕ್ಕೆ ಕ್ಷಿಪಣಿಯಂತಹ ವಸ್ತುವೊಂದು ಬಿದ್ದಿದ್ದು, ಶನಿವಾರ ಬೆಳಿಗ್ಗೆ ನಗರವನ್ನು ಬೆಚ್ಚಿಬೀಳಿಸಿದ ದೊಡ್ಡ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.


ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಬಹು ಸ್ಫೋಟಗಳ ಶಬ್ದ ಕೇಳಿಬಂದಿದೆ. ಅದೇ ಸಮಯದಲ್ಲಿ ಮೂರು ಪಾಕಿಸ್ತಾನಿ ವಾಯುನೆಲೆಗಳಲ್ಲಿ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿದ ವರದಿಗಳು ಬಂದಿವೆ. ಸ್ಫೋಟದ ಕುರಿತು ಯಾವುದೇ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಇಂದು ಮುಂಜಾನೆ ಅಮೃತಸರದ ಮೇಲೆ ಪಾಕಿಸ್ತಾನ ಡ್ರೋನ್‌ ದಾಳಿ ನಡೆಸಲು ಪ್ರಯತ್ನಿಸಿದೆ.


ಭಾರತೀಯ ಪಡೆಗಳು ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ನಾಗರಿಕರನ್ನು ಅಪಾಯಕ್ಕೆ ಸಿಲುಕಿಸುವ ಡ್ರೋನ್‌ಗಳನ್ನು ಭಾರತೀಯ ವಾಯು ರಕ್ಷಣಾ ಘಟಕಗಳು ನಾಶಪಡಿಸಿವೆ ಎಂದು ಭಾರತೀಯ ಸೇನೆಯು ಹೇಳಿದೆ. ಪಾಕಿಸ್ತಾನದ ದಾಳಿಗೆ ಪ್ರತೀಕಾರವಾಗಿ ಭಾರತೀಯ ಪಡೆಗಳು ರಾತ್ರೋರಾತ್ರಿ ಹಲವಾರು ಪಾಕಿಸ್ತಾನಿ ಮಿಲಿಟರಿ ನೆಲೆಗಳು ಹಾಗೂ ಭಯೋತ್ಪಾಕ ಲಾಂಚ್‌ಪ್ಯಾಡ್ ಅನ್ನು ನಾಶಪಡಿಸಿವೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ