LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಉದ್ಘಾಟನಾ ಕಾರ್ಯಕ್ರಮ 

ಮೂಡಲಗಿ : ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟದ ಅಂಗವಾದ ಕಿತ್ತೂರು ರಾಣಿ ಚನ್ನಮ್ಮಾ ತೋಟಗಾರಿಕೆ ಮಹಾವಿದ್ಯಾಲಯ ಅರಭಾವಿಯಿಂದ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದಲ್ಲಿ ಅಂತಿಮ ವ?ದ ಬಿ.ಎಸ್‌ಸಿ. ತೋಟಗಾರಿಕೆ ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಉದ್ಘಾಟನಾ ಸಮಾರಂಭವನ್ನು ಮಂಗಳವಾರ ದಿ.೭.ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಮೊದಲಿಗೆ ತೋಟಗಾರಿಕಾ ಕಿರುಪ್ರದರ್ಶನದ ಕೃಷಿಸಿರಿ ಮೂಲಕ ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ಯುವ ಧುರಿಣರಾದ ಶ್ರೀ. ಅನಿಕೇತನ ಪಟ್ಟಣ ರವರು ರಾಶಿಪೂಜೆ ಮಾಡುವ ಮೂಲಕ ಉದ್ಘಾಟಿಸಿ ಯುಕರನ್ನುದ್ದೇಶಿಸಿ ತೋಟಗಾರಿಕೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಂತಿಮ ವ?ದ ಬಿ.ಎಸ್‌ಸಿ. ತೋಟಗಾರಿಕೆಯ ೭೫ ವಿದ್ಯಾರ್ಥಿಗಳು  ಮೂರು ತಿಂಗಳು ಕಾಲ ಗೊಡಚಿ ಗ್ರಾಮದಲ್ಲಿ ತಂಗಲಿದ್ದು ರೈತರೊಂದಿಗೆ ಸಂಪರ್ಕಹೊಂದಿ ರೈತರಿಂದ ತೋಟಗಾರಿಕಾ ಮಾಹಿತಿ ಪಡೆದುಕೊಳ್ಳುವರು ಮತ್ತು ವಿದ್ಯಾರ್ಥಿಗಳು ರೈತರಿಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುವರು.

ಡಾ. ಆನಂದ ಬ. ಮಾಸ್ತಿಹೊಳಿ, ಡೀನ್ ಕಿರಾಚತೋಮ, ಅರಭಾವಿ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಭಾ?ಣ ಮಾಡಿದರು. ಅಭಿನವ ಯಾದವ, ಜಿಲ್ಲಾ ಅಭಿವೃದ್ಧಿ ಅಧಿಕಾರಿ, ನಬಾರ್ಡ ರವರು ನಬಾರ್ಡ ಸ್ಕೀಮ್ ಮತ್ತು ತಂತ್ರಜ್ಞಾನದ ಕುರಿತು, ಪ್ರಶಾಂತ ಗೊಡಕೆ, ಲೀಡ್ ಬ್ಯಾಂಕ ವ್ಯವಸ್ಥಾಪಕರು ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ರೈತರಿಗೆ ಲಾಭದಾಯಕ ಯೋಜನೆಗಳ ಬಗ್ಗೆ, ಶ್ರೀನಾಥ ಚಿಮ್ಮಲಗಿ, ಸಹಾಯಕ ಕೃಷಿ ನಿರ್ದೇಶಕರು, ರಾಮದುರ್ಗ ರವರು ಕೃಷಿಯನ್ನು ಉದ್ಯಮವಾಗಿ ಹೇಗೆ ಪರಿವರ್ತನೆ ಮಾಡಬಹುದು ಎನ್ನುವುದರ ಬಗ್ಗೆ ಮಾತನಾಡಿದರು. ಪ್ರಕಾಶ ಮುರಕಟನಾಳ, ಪ್ರಗತಿಪರ ರೈತರು, ಗೊಡಚಿ ರವರು ತಮ್ಮ ಕೃಷಿ ಅನುಭವದ ಬಗ್ಗೆ ಹೇಳಿಕೊಂಡರು ಮತ್ತು ಪ್ರಕಾಶ ಮುಗಳಖೋಡರವರು ಸರ್ಕಾರಿ ಸೌಲಭ್ಯಗಳ ಕುರಿತು ಹೇಳಿದರು.

ಕಾರ್ಯಕ್ರಮದಲ್ಲಿ ಮಂಜುನಾಥ ದೇವರೆಡ್ಡಿ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗೊಡಚಿ, ಆರ್. ವಿ ದಾಸರ, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಚಂದರಗಿ, ಅಶೋಕ ವಾಲಿಕಾರ, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಚಂದರಗಿ ಮತ್ತು ಗ್ರಾಮದ ರೈತರು ಸೇರಿದಂತೆ ಕಿರಾಚತೋಮ ಅರಭಾವಿಯ ಡಾ. ವಿಲಾಸ ಡಿ. ಗಸ್ತಿ, ಗ್ರಾ.ತೋ.ಕಾ.ಶಿ., ಸಂಯೋಜಕರು, ಡಾ. ಎಸ್. ಜಿ. ಪ್ರವೀಣಕುಮಾರ, ಗ್ರಾ.ತೋ.ಕಾ.ಶಿ., ಸಹ ಸಂಯೋಜಕರು, ಕಿರಾಚತೋಮ, ಅರಭಾವಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ನಾಗಮಣಿ ನಿರೂಪಿಸಿದರು, ಕು. ಸ್ಪೂರ್ತಿ ಪ್ರಾರ್ಥನಾಗೀತೆ ಹಾಡಿದರು. ರೈತಗೀತೆಯನ್ನು ಪೂಜಾ ಹಾಗೂ ಸಂಗಡಿಗರು, ಸುನಿತಾ ಸ್ವಾಗತಿಸಿದರು ಪ್ರದೀಪ ವಂದಿಸಿದರು.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್