LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪದಗ್ರಹಣ ಕಾರ್ಯಕ್ರಮ: ಕಾರ್ಯಾಲಯ ಉದ್ಘಾಟನೆ

ಬಾಗಲಕೋಟೆ,.01: ಲೋಕಸಭಾ ಚುನಾವಣೆ ನಿಮಿತ್ಯ ಭಾರತೀಯ ಜನತಾ ಪಕ್ಷ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಇದೆ ದಿನಾಂಕ ೨ ಮಂಗಳವಾರ ದಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಚರಂತಿಮಠ ಶಿವಾನುಭವ ಕಲ್ಯಾಣ ಮಂಟಪದಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಜರುಗಲಿದೆ.

ಅಲ್ಲದೆ ನಗರ ಹಾಗೂ ಗ್ರಾಮೀಣ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ, ಇದಕ್ಕಿಂತ ಮುಂಚೆ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಬಾಗಲಕೋಟೆ ವಿಧಾನ ಸಭಾ ಮತಕ್ಷೇತ್ರ ಚುನಾವಣಾ ಪ್ರಚಾರ ಕಾರ್ಯಾಲದಯ ಉದ್ಘಾಟನೆ ಜರುಗಲಿದೆ.

ಈ ಸಮಾವೇಶದಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣಾ ಉಸ್ತುವಾರಿ ಲಿಂಗರಾಜ ಪಾಟೀಲ, ಶಾಸಕ ಮಹೇಶ ಟೆಂಗಿನಕಾಯಿ, ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ನಿಕಟಪೂರ್ವ ಶಾಸಕರಾದ ಡಾ.ವೀರಣ್ಣ ಚರಂತಿಮಠ, ಶಾಸಕರು, ಮಾಜಿ ಶಾಸಕರುಗಳು, ಮುಖಂಡರು, ಜಿಲ್ಲಾ, ೨ ನಗರ ಮತ್ತು ಗ್ರಾಮೀಣ ಪದಾಧೀಕಾರಿಗಳು, ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್