LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಧಾರವಾಡದಲ್ಲಿ ಮೌನೇಶ್ವರ ಸ್ವಾಗತ ಕಮಾನು ಉದ್ಘಾಟನೆ 

ಧಾರವಾಡ ಜೂನ್ ,30 : ಇಲ್ಲಿಯ ಕಸಬಾ ಗಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ 17 ಲಕ್ಷ ರೂಪಾಯಿ ವೆಚ್ಚದಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗಿರುವ ಸ್ವಾಗತ ಕಮಾನನ್ನು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರೂ , ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಅರವಿಂದ ಬೆಲ್ಲದ ಅವರು ಉದ್ಘಾಟಿಸಿದರು.
ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ ಅವರು ಮಹಾಪೌರರಾಗಿದ್ದ ಸಂದರ್ಭದಲ್ಲಿ ನೀಡಿದ 12 ಲಕ್ಷ ರೂ. ಹಾಗೂ ಧಾರವಾಡದ ಪಾಲಿಕೆ ಸದಸ್ಯೆ ಶ್ರೀಮತಿ ರತ್ನಾಬಾಯಿ ನಾಜರೆ ಅವರ 5 ಲಕ್ಷ ರೂ.ಗಳ ಅನುದಾನದಲ್ಲಿ ಈ ಸ್ವಾಗತ ಕಮಾನನ್ನು ನಿರ್ಮಿಸಲಾಗಿದೆ. ಸ್ವಾಗತ ಕಮಾನು ಉದ್ಘಾಟಿಸಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ ಅವರು," ಶ್ರೀ ಮೌನೇಶ್ವರ ದೇವಸ್ಥಾನದ ಗೋಪುರ ಹಾಗೂ ದೇವಸ್ಥಾನದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಮ್ಮ ಶಾಸಕರ ನಿಧಿಯಿಂದ 10 ಲಕ್ಷ ರೂಗಳನ್ನು ಮಂಜೂರು ಮಾಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು .
ಮಾಜಿ ಮಹಾ ಪೌರರು ಹಾಗೂ ಹಾಲಿ ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ, ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆಯ ಅಧ್ಯಕ್ಷ ಮಹಾರುದ್ರ ಬಡಿಗೇರ, ಶ್ರೀ ಕಾಳಿಕಾದೇವಿ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ ನ ಅಧ್ಯಕ್ಷ ಜಿ.ಎಸ್. ಪಟ್ಟಣಕೋಡಿ, ಗಾಯಿತ್ರಿ ಮಾತಾ ಮಹಿಳಾ ಮಂಡಲ ಅಧ್ಯಕ್ಷೆ ಶ್ರೀಮತಿ ಸರೋಜಾ ಬಡಿಗೇರ, ವಿಶ್ವಕರ್ಮ ಸಮಾಜದ ಗಣ್ಯರಾದ  ನಿರಂಜನ ಬಡಿಗೇರ, ಆರ್.ಸಿ.ನೇಗಿನಾಳ, ಸಂತೋಷ ಬಡಿಗೇರ, ವಿ.ಎಮ್ ಕಿಲ್ಲೆದ,ಡಾll ವಿರೂಪಾಕ್ಷ ಬಡಿಗೇರ, ಸಿಪಿ ಮಾಯಾಚಾರಿ, ರಮೇಶ ಬಡಿಗೇರ, ಸೋಮಶೇಖರ ಅರ್ಕಸಾಲಿ , ಶ್ರೀಮತಿ ಶೋಭಾ ಪತ್ತಾರ ಮತ್ತು ವಿಶ್ವಕರ್ಮ ಸಮಾಜದ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಮತ್ತು ಹುಬ್ಬಳ್ಳಿ ಮತ್ತು ಧಾರವಾಡ ನಗರದ  ಹಲವಾರು ಗಣ್ಯರು ಪಾಲ್ಗೊಂಡಿದ್ದರು.
.....................................................

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್