Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋಮಸಮುದ್ರದಲ್ಲಿ ಅಗರಬತ್ತಿ ತಯಾರಿಕೆ ಶಿಬಿರ

ಬಳ್ಳಾರಿ, ಮೇ.31: :ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ 11 ದಿನ ಅಗರಬತ್ತಿ ತರಬೇತಿ ಪಡೆದ ಶಿಬಿರಾರ್ಥಿಗಳಿಂದ ಅಗರಬತ್ತಿ ಮೇಳ ಹಾಗೂ ಮಹಿಳಾ ಋತುಚಕ್ರ ಜಾಗೃತಿ ಕಾರ್ಯಕ್ರಮ ನಿನ್ನೆ ನಡೆಯಿತು.
ಎನ್.ಆರ್.ಎಲ್.ಎಮ್ ಯೋಜನೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಸಂಸ್ಥೆಯ ಶ್ರೀ ಕೊಟ್ಟೂರೇಶ್ವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಇದನ್ನು ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಕುರುಗೋಡು ತಾಲೂಕು ಪಂಚಾಯ್ತಿ ಇಓ ಕೆ.ವಿ.ನಿರ್ಮಲ ಸ್ವಾವಲಂಬಿ ಬದುಕಿಗೆ ಸಾಲ ಸೌಲಭ್ಯಗಳ ಬಳಕೆ ಕುರಿತು ತಿಳಿಸಿದರು
ತರಬೇತಿ ಪಡೆದ ಶಿಬಿರಾರ್ಥಿಗಳು ಸಿದ್ಧಪಡಿಸಿದ ಅಗರಬತ್ತಿಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವೀಕ್ಷಿಸಿ ತೀವ್ರ ಸಂತಸ ವ್ಯಕ್ತಪಡಿಸಿದರು. ಸ್ವತಃ ತಾವೇ ಅಗರಬತ್ತಿಗಳನ್ನು ಖರೀದಿಸುವ ಮೂಲಕ ಮಹಿಳೆಯರನ್ನು ಪ್ರೋತ್ಸಾಹಿಸಿದರು
"ಸ್ವಸಹಾಯ ಸಂಘಗಳ ಮಹಿಳೆಯರು ಮುಂದಿನ ದಿನಗಳಲ್ಲಿ ಕೇವಲ ತರಬೇತಿಗೆ ಸೀಮಿತವಾಗದೆ, ಎನ್.ಆರ್ ಎಲ್ ಎಂ ಯೋಜನೆಯಡಿ ಸಿಗುವ ಸಾಲ ಸೌಲಭ್ಯಗಳು ಹಾಗೂ ಎಂಪಿಇಜಿಪಿ ಯೋಜನೆಯಡಿ ಸಾಲ ಪಡೆದು ಸ್ವಂತ ಅಗರಬತ್ತಿ ಉದ್ಯಮವನ್ನು ಆರಂಭಿಸಿ ದೊಡ್ಡ ಉದ್ಯಮಿಗಳಾಗಿ ಬೆಳೆಯಬೇಕು ಎಂದರು
ಋತುಚಕ್ರದ ಸಮಯದಲ್ಲಿ ಮಹಿಳೆಯರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಳಸಿದ ಪ್ಯಾಡ್ಗಳನ್ನು ಎಲ್ಲೆಂದರಲ್ಲಿ ಬಿಸಾಡದೆ, ಸ್ವಚ್ಛತಾ ವಾಹನಗಳಿಗೆ ನೀಡಬೇಕು ಅಥವಾ ಶಾಲಾ ಮಟ್ಟದಲ್ಲಿರುವ ಬರ್ನಿಂಗ್ ಮಿಷನ್ ಬಳಸಿ ಸುಟ್ಟು ವಿಲೇವಾರಿ ಮಾಡಬೇಕು ಎಂದು ಜಾಗೃತಿ ಮೂಡಿಸಿದರು.
ಈ ವೇಳೆ ಗ್ರಾಪಂ ಕಾರ್ಯದರ್ಶಿ ಗೋವಿಂದಪ್ಪ,
ಉಪನ್ಯಾಸಕ ದಿನೇಶ್, ಕರವಸೂಲಿಗಾರ ಹೊನ್ನೂರಸ್ವಾಮಿ, ಹೆಚ್. ಅಡಿವೆಪ್ಪ, ಆಶಾ ಕಾರ್ಯಕರ್ತೆಯರು ಹಾಗೂ ತರಬೇತಿ ಪಡೆದ ಮಹಿಳಾ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*