LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಹಂದಿ ಜ್ವರ

ಬೆಂಗಳೂರು, ಅಕ್ಟೋಬರ್ 10: ವಾತಾವರಣ ವೈಪರೀತ್ಯ ಉಂಟಾದಾಗ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಈ ಪೈಕಿ ಹಂದಿ ಜ್ವರ ಪ್ರಕರಣಗಳು ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಹೆಚ್ಚಾಗಿ ಕಂಡು ಬರುತ್ತಿವೆ. ಬೆಂಗಳೂರಿನಲ್ಲಿ ಕೇವಲ H1N1 ಅಲ್ಲದೆ, H3N2 ಪ್ರಕರಣಗಳಲ್ಲೂ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ಹಂದಿಜ್ವರ ಲಕ್ಷಣಗಳು, ತಡೆಗಟ್ಟುವ ಮಾರ್ಗಗಳ ಬಗ್ಗೆ ಮಾಹಿತಿ ಇಲ್ಲಿದೆ.





ಅನೇಕರು ಈ ರೋಗಲಕ್ಷಣಗಳು ಕಾಣಿಸಿಕೊಂಡಾಗ ಮನೆಮದ್ದುಗಳ ಮೊರೆ ಹೋಗುತ್ತಾರೆ ಆದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಏಕೆಂದರೆ ಸಮಸ್ಯೆಯು ಗಂಭೀರವಾಗಬಹುದು, ಕೆಲವರಲ್ಲಿ ರೋಗಲಕ್ಷಣಗಳು ಕಾಲಕ್ರಮೇಣ ಕಡಿಮೆಯಾಗಬಹುದು. ಉಸಿರಾಟದ ತೊಂದರೆ, ಕಡಿಮೆ ಆಮ್ಲಜನಕದ ಮಟ್ಟ ಮತ್ತು ಉಬ್ಬಸ (wheezing) ಗಂಭೀರವಾದ ಸಮಸ್ಯೆಯ ಲಕ್ಷಣಗಳಾಗಿವೆ. ಒಣ ಕೆಮ್ಮು ಕಾಣಿಸಿಕೊಳ್ಳುವುದರಿಂದ ರೋಗಿಯಲ್ಲಿ ಹೆಚ್ಚು ಆಯಾಸ ಉಂಟು ಮಾಡುತ್ತದೆ ಹಾಗಾಗಿ ಅನೇಕರು ಆಹಾರ ಸೇವಿಸುವುದನ್ನು ನಿಲ್ಲಿಸುತ್ತಾರೆ, ವಯಸ್ಕರಲ್ಲಿ ಈ ರೀತಿಯ ತೀವ್ರ ರೋಗಲಕ್ಷಣಗಳು ಕಂಡುಬರುತ್ತವೆ. 70 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಜ್ವರ ಕಾಣಿಸಿಕೊಳ್ಳಬಹುದು ಜೊತೆಗೆ ದೀರ್ಘಕಾಲದ ಆಯಾಸ ಕಂಡುಬರುವುದರಿಂದ ಆಹಾರ ತಿನ್ನುವುದನ್ನು ನಿಲ್ಲಿಸುತ್ತಾರೆ. ಒಂದು ವೇಳೆ ಅವರಿಗೆ ಕೆಮ್ಮು ಮತ್ತು ಶೀತದಂತಹ ಲಕ್ಷಣಗಳು ಇಲ್ಲದಿದ್ದರೂ ಸಹ ಹಂದಿ ಜ್ವರ (swine flu) ಲಕ್ಷಣವನ್ನು ಹೋಲುತ್ತದೆ. ಇಂತಹ ಸಂದರ್ಭಗಳಲ್ಲಿ ಮನೆ ಮದ್ದು ಬಳಸುವುದಕ್ಕಿಂತ ಆಸ್ಪತ್ರೆಗೆ ಭೇಟಿ ನೀಡುವುದು ಉತ್ತಮ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್