LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಉಗ್ರ ಕೃತ್ಯದ ಮೂಲಕ ಪಾಕ್‌ ಸಿಂಧೂ ಒಪ್ಪಂದ ಉಲ್ಲಂಘಿಸಿದೆ: ವಿಶ್ವಸಂಸ್ಥೆಯಲ್ಲಿ ಭಾರತ ಕೆಂಡ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಪಂಚ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅದರಲ್ಲಿ ಪ್ರಮುಖ ಸಿಂಧೂ ನದಿ ನೀರನ್ನು ಪಾಕಿಸ್ತಾನ ಬಿಡುವುದನ್ನು ಸ್ಥಗಿತಗೊಳಿಸಿದ್ದು, ಇದೀಗ ಈ ಬಗ್ಗೆ ವಿಶ್ವಸಂಸ್ಥೆಯಲ್ಲಿಪಾಕ್ ತಕರಾರು ಎತ್ತಿದೆ. ಜತೆಗೆ ಭಾರತದ ನಿರ್ಧಾರವನ್ನು ಟೀಕಿಸಿದೆ. ಆದರೆ ಇದಕ್ಕೆ ಭಾರತ ಸರಿಯಾಗಿ ಉತ್ತರವನ್ನು ನೀಡಿದೆ. ಭಾರತ ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾತ್ರವಲ್ಲದೆ ಅನೇಕ ಉದಾಹರಣೆಗಳನ್ನು ನೀಡಿ. ಹಾಗೂ ಭಯೋತ್ಪಾದನೆ ದಾಳಿ ಭಾರತದ ಜತೆಗೆ ಮಾಡಿಕೊಂಡ ಹಲವು ಒಪ್ಪಂದವನ್ನು ಉಲ್ಲಂಘನೆ ಮಾಡಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ತಿಳಿಸಿದೆ. 1960 ರ ನೀರು ಹಂಚಿಕೆ ಒಪ್ಪಂದವನ್ನು ಉಲ್ಲಂಘಿಸಿದ್ದು ಭಾರತವಲ್ಲ, ಪಾಕಿಸ್ತಾನ ಎಂದು ಹೇಳಿದೆ. ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ನಿಯೋಗ ಅನೇಕ ತಪ್ಪು ಮಾಹಿತಿಯನ್ನು ಹರಡಿದೆ. ಪಾಕ್ ಮಾಡುತ್ತಿರುವ ಆರೋಪಗಳನ್ನು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ತಳ್ಳಿಹಾಕಿದ್ದಾರೆ.









ಭಾರತ ಸಿಂಧೂ ಒಪ್ಪಂದವನ್ನು ಮುರಿದಿಲ್ಲ, ಪಾಕ್ ಮಾಡುತ್ತಿರವ ಭಯೋತ್ಪಾದನ ದಾಳಿಯಿಂದ ಈ ಒಪ್ಪಂದವನ್ನು ಮುರಿದುಕೊಂಡಿದೆ. ಇತ್ತೀಚಿನ ಪಹಲ್ಗಾಮ್ ದಾಳಿಯು ಇತ್ತೀಚಿನ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. ಮತ್ತೆ ಮತ್ತೆ ಭಾರತದ ಮೇಲೆ ಗಡಿಯಾಚೆಗಿನ ಭಯೋತ್ಪಾದನೆ ದಾಳಿಯಿಂದ ಈ ಒಪ್ಪಂದವನ್ನು ಮುರಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಭಾರತವು 65 ವರ್ಷಗಳ ಹಿಂದೆ ಸಿಂಧೂ ನದಿ ಜಲ ಒಪ್ಪಂದವನ್ನು ಮಾಡಿಕೊಂಡಿತ್ತು. ಒಪ್ಪಂದದ ಪೀಠಿಕೆ ಹೇಳುವ ಪ್ರಕಾರ ಈ ಒಪ್ಪಂದವನ್ನು ಸದ್ಭಾವನೆ ಮತ್ತು ಸ್ನೇಹದ ಮನೋಭಾವಗಾಗಿ ಮಾಡಿಕೊಂಡಿತ್ತು. ಆರುವರೆ ದಶಕಗಳಲ್ಲಿ, ಪಾಕಿಸ್ತಾನವು ಭಾರತದ ಮೇಲೆ ಮೂರು ಯುದ್ಧಗಳು ಮತ್ತು ಸಾವಿರಾರು ಭಯೋತ್ಪಾದಕ ದಾಳಿಗಳನ್ನು ನಡೆಸುವ ಮೂಲಕ ಒಪ್ಪಂದದ ಮಹತ್ವವನ್ನು ಉಲ್ಲಂಘಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ