LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ?!

ನವದೆಹಲಿ: ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರ ಪತನದ ಬಳಿಕ ದೇಶ ತೊರೆದಿರುವ ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಯುಕೆಯಲ್ಲಿ ಆಶ್ರಯ ಪಡೆಯುವವರೆಗೆ ಅವರು ಭಾರತದಲ್ಲಿ ಇರಲಿದ್ದು, ಎಲ್ಲಾ ರೀತಿಯ ಬೆಂಬಲ ಸಿಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಸೀನಾ ವಾಸ್ತವ್ಯ ತಾತ್ಕಾಲಿಕವಾಗಿರಲಿದೆ. ಬ್ರಿಟನ್​ಗೆ ಸ್ಥಳಾಂತರವಾಗುವವರೆಗೆ ಅವರು ನವದೆಹಲಿಯಲ್ಲಿ ಇರಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರದ ವಿರುದ್ಧ ವ್ಯಕ್ತವಾದ ಭಾರೀ ಪ್ರತಿಭಟನಾ ಹಿಂಸಾಚಾರದ ಹಿನ್ನಲೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ಅವರು ಲಂಡನ್​ನಲ್ಲಿ ನೆಲೆಯೂರುವ ಚಿಂತನೆ ನಡೆಸಿದ್ದಾರೆ. ಆದರೆ, ಅವರಿಗೆ ರಾಜಕೀಯ ಆಶ್ರಯ ನೀಡುವ ಬಗ್ಗೆ ಯುನೈಟೆಡ್​ ಕಿಂಗಡಮ್​ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ದೃಢೀಕರಣ ಸಿಕ್ಕಿಲ್ಲ ಎನ್ನಲಾಗಿದೆ. ಅವರ ಸಹೋದರಿ ಯುಕೆ ಪೌರತ್ವ ಹೊಂದಿದ ಹಿನ್ನಲೆ ಅವರ ಜೊತೆಗೆ ನೆಲೆಸಲು ಬ್ರಿಟನ್​ ಆಶ್ರಯ ಕೋರುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.


ಬಾಂಗ್ಲಾದೇಶದ ಪಿತಾಮಹ ಶೇಖ್​ ಮಜಿಬುರ್​ ರೆಹಮಾನ್​ ಮತ್ತು ಶೇಖ್ ಫಜಿಲತುನ್ ನೆಚಾ ಮುಜಿಬ್ ಅವರ ಕಿರಿಯ ಮಗಳು ರೆಹನಾ ಶೇಖ್​ ಹಸೀನಾ ಕಿರಿಯ ಸಹೋದರಿಯಾಗಿದ್ದಾರೆ. ಇವರ ಮಗಳು ಟುಲಿಪ್​ ಸಿದ್ಧಿಕ್​ ಬ್ರಿಟನ್​ ಸಂಸತ್​ನಲ್ಲಿ ಲೇಬರ್​ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ