LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ನೇಪಾಳ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ

ಕಾಠ್ಮಂಡು: ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮ ಒಲಿ  ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ ಸಲ್ಲಿಸಿದ್ದಾರೆ. ಎರಡು ದೇಶಗಳ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೋದಿ ಅವರು, ʼʼನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕವಾದ ಕೆ.ಪಿ.ಶರ್ಮ ಒಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡೂ ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಪರಸ್ಪರ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

ಶುಕ್ರವಾರ ನಡೆದ ವಿಶ್ವಾಸಮತ ಯಾಚನೆಯ ವೇಳೆ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಬಹುಮತ ಸಾಬೀತುಪಡಿಸಲು ವಿಫಲರಾಗಿ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದರು. ಹೀಗಾಗಿ ಸಿಪಿಎನ್‌-ಯುಎಂಎಲ್‌ (Nepal-Unified Marxist Leninist (CPN-UML) ಪಕ್ಷದ ಅಧ್ಯಕ್ಷ, 72 ವರ್ಷದ ಕೆ.ಪಿ.ಶರ್ಮ ಒಲಿ ಪ್ರಧಾನಿಯಾಗಿ ನೇಮಕಗೊಂಡರು. ಈ ಹಿಂದೆ ಅವರು 2015ರ ಅಕ್ಟೋಬರ್ 11ರಿಂದ 2016ರ ಆಗಸ್ಟ್ 3ರವರೆಗೆ, 2018ರ ಫೆಬ್ರವರಿ 5ರಿಂದ 2021ರ ಜುಲೈ 13ರವರೆಗೆ ಕೆ.ಪಿ.ಶರ್ಮಾ ಒಲಿ ನೇಪಾಳದ ಪ್ರಧಾನ ಮಂತ್ರಿಯಾಗಿದ್ದರು. ಒಲಿ ಅವರು ಚೀನಾ ಪರ ಒಲವು ಹೊಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್