LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪಾರದರ್ಶಕತೆಯಿಂದ ಆಗಬೇಕು : ಉಪೇಂದ್ರ

ಬೆಂಗಳೂರು: ಕಳೆದ ಒಂದು ವಾರದಿಂದ ಸಿನಿಮಾರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕೊಲೆ ಪ್ರಕರಣ ಬಾರಿ ಸುದ್ಧಿಯಲ್ಲಿದೆ. ಸದ್ಯ ದರ್ಶನ್ ಪ್ರಕರಣದಿಂದ ಚಿತ್ರರಂಗಕ್ಕೆ ಕಪ್ಪು ಚುಕ್ಕೆಯಾಗಿದ್ದು, ಇದೀಗ ನಟ ಮತ್ತು ನಿರ್ದೇಶಕ ಉಪೇಂದ್ರ ಅವರು ದರ್ಶನ್ ಪ್ರಕರಣದ ಬಗ್ಗೆ ಮೌನ ಮುರಿದಿದ್ದಾರೆ‌. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ.

ತಮ್ಮ ಎಕ್ಸ್​ ಖಾತೆಯಲ್ಲಿ, "ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್​ನ ವಿಚಾರಣೆಯಲ್ಲಿ ನಿಷ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,
ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ".


"ಏಕೆಂದರೆ ಯಾವುದೇ ಕೇಸ್ ಆದರೂ ಆ ಕೇಸ್​ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು" (ಕಾನೂನು ಸುಧಾರಣೆಗಳು Criminal Justice Reforms)


"ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಪ್ರಕರಣ ಆಗಿದ್ದರೆ ಆ ಪ್ರಕರಣ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಸಾಮಾನ್ಯ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು,ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.


ಆಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೊಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ" ಎಂದು ಉಪೇಂದ್ರ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.


ಇನ್ನು ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ, ಜಗ್ಗೇಶ್, ಆ ದಿನಗಳು ಚೇತನ್ ಸೇರಿಂದ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದಿದ್ದರು‌. ಅದೇ ರೀತಿ ಕಿಚ್ವ ಸುದೀಪ್ ಕೂಡ ರೇಣುಕಾಸ್ವಾಮಿ ಕೊಲೆ ಬಗ್ಗೆ ಮಾತನಾಡಿದ್ದು, ರೇಣುಕಾಸ್ವಾಮಿ ಕೊಲೆಗೆ ನ್ಯಾಯಸಿಗಬೇಕು. ಹುಟ್ಟುವ ಮಗುವಿಗೆ ನ್ಯಾಯಸಿಗಬೇಕು ಅಂತಾ ಹೇಳಿದ್ದಾರೆ. ಇದೀಗ ಉಪೇಂದ್ರ ಕೂಡ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್