LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಇರಾನ್‌ನ ಪರಮಾಣು ನೆಲೆಗಳ ಮೇಲೆ ಇಸ್ರೇಲ್‌ ಅಟ್ಯಾಕ್‌ : ನಸುಕಿನ ಜಾವ ಇರಾನ್‌ ಶೇಕ್‌!

ಜೆರುಸಲೇಂ, ಜೂನ್ 13: ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್  ಸೇನೆಯು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.









ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ. ಇರಾನ್ ಶೀಘ್ರದಲ್ಲೇ ಅತ್ಯಂತ ಬಲಿಷ್ಠ ಪರಮಾಣು ಶಕ್ತಿಯಾಗಲಿದೆ ಎಂಬ ವರದಿಗಳು ಇತ್ತೀಚೆಗೆ ನಿರಂತರವಾಗಿ ಬಿತ್ತರವಾಗುತ್ತಿದ್ದವು. ಇರಾನ್ ಈ ದಿಕ್ಕಿನಲ್ಲಿ ವೇಗವಾಗಿ ಕೆಲಸ ಮಾಡುತ್ತಿತ್ತು. ಇದರ ಬೆನ್ನಲ್ಲೇ ಇಸ್ರೇಲ್ ಈಗ ಆ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡಿದೆ.

ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಬಿಡುವುದಿಲ್ಲ ಎಂದು ಇಸ್ರೇಲ್ ಕೆಲವು ವರ್ಷಗಳಿಂದಲೂ ಎಚ್ಚರಿಕೆ ನೀಡುತ್ತಾ ಬಂದಿತ್ತು. ಇದೀಗ ಇಸ್ರೇಲ್ ಅದರಂತೆಯೇ ಕಾರ್ಯಪ್ರವೃತ್ತವಾಗಿದೆ. ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್