LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸರ್ಕಾರ ಬೀಳಿಸುವುದು ಅಸಾಧ್ಯ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು,11: ಸರ್ಕಾರ ಬೀಳಿಸುವುದು ಅಸಾಧ್ಯವಾದ ಮಾತು. ಬಿಜೆಪಿಯ ಶಾಸಕರೇ ನಮ್ಮ‌ ಜೊತೆ ಇದ್ದಾರೆ. ಜೆಡಿಎಸ್​​ನಲ್ಲಿರುವವರು ಅತಂತ್ರರಾಗಿದ್ದಾರೆ. ಲೀಡರ್ಸ್​ಗಳು ನಮ್ಮನ್ನು ಸೇರಿಸಿಕೊಳ್ಳಿ ಅಂತ ಕೇಳುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದರು.


ಸದಾಶಿವ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಕೆಲವೇ ತಿಂಗಳುಗಳಲ್ಲಿ ಸರ್ಕಾರ ಬೀಳುತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ಹೇಳಿಕೆ ಅಷ್ಟೇ. ಈ ಸರ್ಕಾರ ಬೀಳಿಸಬೇಕಾದ್ರೆ 60 ಶಾಸಕರು ಬೇಕು. ಇಬ್ಬರಿಂದ ನಾಲ್ಕು ಶಾಸಕರನ್ನ ಕರೆದುಕೊಂಡು ಬರಲಿ. ಬಿಜೆಪಿಯ ಶಾಸಕರೇ ನಮ್ಮೊಂದಿಗಿದ್ದಾರೆ. ಜೆಡಿಎಸ್​ನವರು ಅತಂತ್ರರಾಗಿದ್ದಾರೆ ಎಂದು ತಿಳಿಸಿದರು.


ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೊಡ್ಡವರೇ ನಮ್ಮ ಹಿಂದೆ ಇದ್ದಾರೆ ಎಂಬ ದೇವರಾಜೇಗೌಡ ಹೇಳಿಕೆ‌ ವಿಚಾರವಾಗಿ ಪ್ರತಿಕ್ರಿಯಿಸಿ, ಈಗ ಎಸ್​​ಐಟಿ‌ ರಚನೆ ಆಗಿದೆ. ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸಲು ಒಪ್ಪಲ್ಲ. ಎಸ್​​ಐಟಿ ತನ್ನ ಕೆಲಸ ಮಾಡುತ್ತೆ ಎಂದರು.


ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಂತ ಹೆಚ್​ಡಿಕೆ ರಾಜ್ಯಪಾಲರ ಭೇಟಿ ವಿಚಾರವಾಗಿ ಮಾತನಾಡಿ, ಕ್ಲೀನ್ ಚೀಟ್ ಕೊಡೋಕಾ?. ವಾಷಿಂಗ್ ಮಷನ್​​ಗೆ ಹಾಕೋಕಾ? ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ನಾವು ಕನಿಷ್ಠ 20 ಸ್ಥಾನ ಗೆಲ್ಲಲಿದ್ದೇವೆ. ಊಹೆ ಮಾಡಲಾರದಷ್ಟು ಅಂಡರ್ ಕರೆಂಟ್ ಆಗಿದೆ. ಮಹಿಳೆಯರು, ಬಡ ಕುಟುಂಬದವರು ಕಾಂಗ್ರೆಸ್​ಗೆ ಒಲವು ತೋರಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಾವು ಗೆಲ್ಲುತ್ತೇವೆ. ಒಂದು ಲಕ್ಷ ಲೀಡ್​​ನಲ್ಲಿ ನಾವು ಜಯ ಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ