LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೃದಯಾಘಾತದಿಂದ ಐಟಿಐ ತರಬೇತಿ ಅಧಿಕಾರಿ ಎಸ್.ಎ. ಬಿರಾದರ್ ನಿಧನ

ಬಳ್ಳಾರಿ, ಜೂ. 11: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಬಳ್ಳಾರಿಯ ಹಿರಿಯ ತರಬೇತಿ ಅಧಿಕಾರಿಯಾಗಿದ್ದ ಶ್ರೀ ಎಸ್.ಎ. ಬಿರಾದರ್ (53) ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಮಂಗಳವಾರ ರಾತ್ರಿ ಅವರಿಗೆ ಏಕಾಏಕಿ ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದ ಮೂಲ ನಿವಾಸಿಯಾಗಿದ್ದ ಅವರು ಕಳೆದ 28 ವರ್ಷಗಳಿಂದ ಬಳ್ಳಾರಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಕರ್ತವ್ಯನಿಷ್ಠೆ, ಶಿಸ್ತು, ವಿದ್ಯಾರ್ಥಿಗಳ ಮೇಲಿನ ಕಾಳಜಿ ಹಾಗೂ ಸಹೋದ್ಯೋಗಿಗಳೊಂದಿಗೆ ಹೊಂದಿದ್ದ ಆತ್ಮೀಯ ಸಂಬಂಧಗಳಿಂದ ಸಂಸ್ಥೆಯಲ್ಲಿ ಅಪಾರ ಗೌರವ ಗಳಿಸಿದ್ದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಿರಾದರ್ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಉತ್ತಮ ತಾಂತ್ರಿಕ ಪರಿಣತರನ್ನಾಗಿ ರೂಪಿಸಿದ್ದರು. ಅವರ ಸರಳ ವ್ಯಕ್ತಿತ್ವ, ಸೇವಾಭಾವ ಹಾಗೂ ಶಿಕ್ಷಣ ಕ್ಷೇತ್ರದ ಮೇಲಿನ ಬದ್ಧತೆ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅಚ್ಚಳಿಯದ ನೆನಪಾಗಿ ಉಳಿದಿದೆ.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಯಿತು. ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರಾದ ಗೋವಿಂದಪ್ಪ ಅವರು ಕಂಬನಿ ಮಿಡಿದು, “ಬಿರಾದರ್ ಸರ್‌ ಅವರಂತಹ ಕರ್ತವ್ಯನಿಷ್ಠ, ವಿದ್ಯಾರ್ಥಿ ಪರ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡ ಶಿಕ್ಷಕರು ಅಪರೂಪ. ಅವರ ಅಗಲಿಕೆ ಸಂಸ್ಥೆಗೆ ತುಂಬಲಾರದ ನಷ್ಟವಾಗಿದೆ. ಇಂತಹ ಶಿಕ್ಷಕರು ಮತ್ತೆ ಸಿಗುವುದು ಕಷ್ಟ” ಎಂದು ದುಃಖ ವ್ಯಕ್ತಪಡಿಸಿದರು.
ಮೃತರ ಅಂತ್ಯಕ್ರಿಯೆ ನಾಳೆ ಗುರುವಾರ ಅವರ ಸ್ವಗ್ರಾಮ ಅಹಿರಸಂಗದಲ್ಲಿ ವೀರಶೈವ ಸಂಪ್ರದಾಯದ ವಿಧಿವಿಧಾನಗಳೊಂದಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶ್ರದ್ಧಾಂಜಲಿ
ಶ್ರೀ ಎಸ್.ಎ. ಬಿರಾದರ್ ಅವರ ಅಕಾಲಿಕ ನಿಧನವು ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಅಪಾರ ನಷ್ಟವನ್ನುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ