LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಐಟಿ ಕಂಪನಿಗಳಿಗೆ ಅಗತ್ಯ ನೀರು ಪೂರೈಕೆ: ಜಲ ಮಂಡಳಿ ಭರವಸೆ!

ಬೆಂಗಳೂರು, ಮಾರ್ಚ್ 29: ಬೆಂಗಳೂರು ನಗರದಲ್ಲಿರುವ ಎಲ್ಲ ಐಟಿ ಕಂಪನಿಗಳಿಗೆ ಸಾಕಷ್ಟು ನೀರು ಪೂರೈಸಲಾಗುವುದು. ಈ ವಿಚಾರದಲ್ಲಿ ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಭರವಸೆ ನೀಡಿದೆ.

ಮನೆಯಿಂದಲೇ ಕೆಲಸದ ಬೇಡಿಕೆ ಮತ್ತು ನೀರಿನ ಬಿಕ್ಕಟ್ಟಿನಿಂದಾಗಿ ಅನೇಕ ಐಟಿ ಕಂಪನಿಗಳು ನೆಲೆಯನ್ನು ಬದಲಾಯಿಸಲು ನೆರೆಯ ರಾಜ್ಯಗಳಿಂದ ಆಹ್ವಾನ ಸ್ವೀಕರಿಸುತ್ತಿವೆ ಎಂಬ ವದಂತಿಗಳ ಬೆನ್ನಲ್ಲೇ, ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಗುರುವಾರ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘದೊಂದಿಗೆ ಸಭೆ ನಡೆಸಿದರು. ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ನಗರದಲ್ಲಿರುವ ಐಟಿ ಕಂಪನಿಗಳಿಗೆ ಸಾಕಷ್ಟು ನೀರು ದೊರೆಯುವಂತೆ ಮಾಡಲಿದ್ದೇವೆ. ನಗರದಾದ್ಯಂತ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಾವು ಕ್ರಮಗಳನ್ನು ಕೈಗೊಂಡಿದ್ದೇವೆ ಮತ್ತು ಕಂಪನಿಗಳಿಗೆ ಕೂಡ ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಕಂಪನಿಗಳು ನೀರನ್ನು ಎಚ್ಚರಿಕೆಯಿಂದ ಬಳಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಅನಗತ್ಯ ಉದ್ದೇಶಗಳಿಗಾಗಿ ನೀರಿನ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಬೆಂಗಳೂರಿನ ನೀರಿನ ಬಿಕ್ಕಟ್ಟಿನಿಂದಾಗಿ ವರ್ಕ್ ಫ್ರಮ್ ಹೋಮ್ ಆಯ್ಕೆ ನೀಡಬೇಕೆಂದು ನಗರದ ಅನೇಕ ಐಟಿ ಉದ್ಯೋಗಿಗಳು ಮನವಿ ಮಾಡಿದ್ದರು. ತಜ್ಞರು ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ನಗರದಲ್ಲಿ ಸುಮಾರು 15ಲಕ್ಷ ಐಟಿ ಉದ್ಯೋಗಿಗಳಿದ್ದು, ವರ್ಕ್ ಫ್ರಮ್ ಹೋಮ್ ನೀಡುವುದರಿಂದ ಸುಮಾರು 10 ಲಕ್ಷ ಜನ ಅವರ ಊರುಗಳಿಗೆ ತೆರಳುವ ಸಾಧ್ಯತೆ ಇದೆ. ಇದರಿಂದ ನಗರದ ನೀರಿನ ಒತ್ತಡ ಕಡಿಮೆ ಮಾಡಬಹುದು ಎಂದು ಇತ್ತೀಚೆಗೆ ತಜ್ಞರು ಹೇಳಿದ್ದರು.

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್