LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಗರದ ಭದ್ರತೆ ಹೆಚ್ಚಿಸಲು   ಜನಜಾಗೃತಿ ಸಂಘ ಪ್ರತಿಭಟನೆ



ಬಳ್ಳಾರಿ, ಮಾ.27: ಬಳ್ಳಾರಿ ನಗರದಲ್ಲಿ ಹೆಚ್ಚುತ್ತಿರುವ ಕಳ್ಳತನ, ದರೋಡೆ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಳ್ಳಾರಿ ನಗರ ಜನಜಾಗೃತಿ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಹುಂಡೇಕರ ರಾಜೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸದಸ್ಯರು ನಗರದಲ್ಲಿ ಸಾರ್ವಜನಿಕರ ಭದ್ರತೆ ಕುರಿತು ಆತಂಕ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ಚೈನ್ ಸ್ನಾಚಿಂಗ್, ದ್ವಿಚಕ್ರ ವಾಹನ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ನಾಗರಿಕರು ಭಯಭೀತ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನಗರದ ಎಲ್ಲಾ ಪ್ರಮುಖ ಸರ್ಕಲ್‌ಗಳಲ್ಲಿ ಹಾಗೂ ಸ್ಲಂ ಪ್ರದೇಶಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಜೊತೆಗೆ ರಾತ್ರಿ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಕಡ್ಡಾಯ ನಗರ ರೌಂಡ್ಸ್ ನಡೆಸಿ, ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ವಿಶೇಷ ಪೊಲೀಸ್ ಪೇದೆಗಳನ್ನು ನಿಯೋಜಿಸಿ ಸಾರ್ವಜನಿಕರ ಭದ್ರತೆ ಹೆಚ್ಚಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಇದೇ ವೇಳೆ ಹೊಸದಾಗಿ ನಿರ್ಮಾಣವಾಗುತ್ತಿರುವ ಲೇಔಟ್ ಪ್ರದೇಶಗಳಲ್ಲಿ ಯುವಕರು ದುಶ್ಚಟಗಳಿಗೆ ಒಳಗಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಂಘದ ಪದಾಧಿಕಾರಿಗಳು, ಡ್ರಗ್ಸ್ ಹಾಗೂ ಮದ್ಯಪಾನದಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ವಾಮಿ ನಾಯ್ಕ್, ಭಾಷಾ,ಗಡಿಲಿಂಗ, ನಾಗರಾಜ್,ಗಂಗಾಧರ,ವೀರೇಶ್, ಪವನ್,ರಾಮರೆಡ್ಡಿ,ಚಂದ್ರ, ಶಂಕರ್,ಮಾಸ್ತನ್,ಪ್ರವೀಣ್, ಶ್ರೀನಿವಾಸ್,ದೇವರಾಜ್, ಬಸವರಾಜ್,ರಾಮಲಿ ನಾಯ್ಕ್, ಯಲ್ಲಪ್ಪ,ಹುಸೇನ್,ಅನಿಲ್, ಅನ್ವರ್,ದುರುಗಪ್ಪ,ನಾಗೇಂದ್ರ, ದೇವೇಂದ್ರ,ಸೀನ,ಮಹೇಶ್, ಸೇರಿದಂತೆ ಜನಜಾಗೃತಿಯ ಮುಖಂಡರು  ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ